ನಗರದ ಹೇಮಾವತಿ ಪ್ರತಿಮೆ ಎದುರು ರೈತ, ಕಾರ್ಮಿಕ, ದಲಿತ ಮತ್ತು ಜನಪರ ಸಂಘಟನೆಗಳ ನೇತೃತ್ವದಲ್ಲಿ ಕರಾಳ ದಿನ ಆಚರಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತ ವಿರೋಧಿ ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಒತ್ತಾಯಿಸಿದರು.
ರೈತ ಸಂಘದ ಮುಖಂಡ ಕಣಗಾಲು ಮೂರ್ತಿ ಮಾತನಾಡಿ, ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ, ಕೇಂದ್ರಸರ್ಕಾರ ಕೂಡಲೇ ದರ ಇಳಿಸಲು ಕ್ರಮ ಕೈಗೊಳ್ಳಬೇಕು. ಕೃಷಿ ಕಾಯ್ದೆ ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು.