ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ‘ಅಧ್ಯಕ್ಷರ ಚುನಾವಣೆ ವೇಳೆ ಅಧಿಕಾರ ಹಂಚಿಕೆ ಕುರಿತು ಮಿತ್ರ ಪಕ್ಷದ ಸದಸ್ಯರೊಂದಿಗೆ ನಡೆದ ಒಪ್ಪಂದದಂತೆ ಅಧಿಕಾರ ತ್ಯಜಿಸುತ್ತಿದ್ದು ಸಕಲೇಶಪುರ ಉಪ ವಿಭಾಗಾಧಿಕಾರಿಗಳಿಗೆ ರಾಜೀನಾಮೆ ಪತ್ರವನ್ನು ಇಂದೇ ಸಲ್ಲಿಸುತ್ತಿರುವುದಾಗಿ ಹೇಳಿದರು. ಪಟ್ಟಣದ ಅಭಿವೃದ್ಧಿ ಕುರಿತು ಹಲವು ಕಾಮಗಾರಿಗಳನ್ನು ಕೈಗೊಂಡಿದ್ದು ಅಧಿಕಾರಿಗಳು ಇದನ್ನು ಗುಣಮಟ್ಟದಿಂದ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಅಧಿಕಾರದ ಅವಧಿಯಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ’ ಹೇಳಿದರು.