ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ವೈ ಸ್ಪರ್ಧಿಸಲ್ಲ ಎಂದು ಹೇಳಿಲ್ಲ: ಸಚಿವ ಜೆ.ಸಿ. ಮಾಧುಸ್ವಾಮಿ

Last Updated 20 ಜನವರಿ 2020, 13:48 IST
ಅಕ್ಷರ ಗಾತ್ರ

ಹಾಸನ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಕುರಿತು ಯಾವುದೇ ಸಭೆ, ಸಮಾರಂಭದಲ್ಲಿ ಹೇಳಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ‘ಪ್ರಭಾಕರ್ ಭಟ್ ಅವರದು ವೈಯಕ್ತಿಕ ಹೇಳಿಕೆ. ಅವರ ಜತೆ ಮಾತನಾಡಿರುವುದು ಗೊತ್ತಿಲ್ಲ. ನಮ್ಮ ಜತೆ ಈ ವಿಚಾರ ಚರ್ಚಿಸಿಲ್ಲ. ಮುಂದಿನ ಚುನಾವಣೆಯಲ್ಲಿ ಮತ್ತೆ 150 ಸೀಟು ಗೆಲ್ಲುತ್ತೇವೆ ಎಂದು ಬಿಎಸ್‌ವೈ ಹೇಳಿದ್ದಾರೆ. ಅವರ ನಾಯಕತ್ವದ ಮೇಲೆ ವಿಶ್ವಾಸ ಇದೆ’ ಎಂದರು.

ಉಪ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಆಳವಾದ ಮಾಹಿತಿಯಿಲ್ಲ. ಮುಖ್ಯಮಂತ್ರಿ ದಾವೊಸ್‌ ಪ್ರವಾಸದಿಂದ ಹಿಂದಿರುಗಿದ ನಂತರ ಸಂಪುಟ ವಿಸ್ತರಣೆಯಾಗಬಹುದು ಎಂದು ಹೇಳಿದರು.

ಅರಕಲಗೂಡು, ಹಾಸನ, ಪಿರಿಯಾಪಟ್ಟಣ ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸುವುದು ಕಾನೂನು ಬಾಹಿರವಲ್ಲ. ರಾಜ್ಯದ ಹಲವೆಡೆ ಟೋಲ್ ಸಂಗ್ರಹಕ್ಕೆ ಸರ್ಕಾರ ಅವಕಾಶ ನೀಡಿದೆ. ಕೃಷಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಉಚಿತ ಪ್ರವೇಶ ನೀಡುವ ಕುರಿತು ಜಿಲ್ಲಾಡಳಿತದಿಂದ ಮಾಹಿತಿ ಪಡೆಯುವುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT