‘ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಕ್ಷದ ಕಾರ್ಯ ಕರ್ತರು,ಶಾಸಕರ ಜತೆ ಕೂತು ಚರ್ಚಿಸಿ ತೀರ್ಮಾನಿಸುತ್ತೇವೆ. ಯಡಿಯೂರಪ್ಪ ಮತ್ತವರಮಗ ಹಾಸನದ ಬಗ್ಗೆ ವಿಶೇಷವಾಗಿ ತಲೆ ಕೆಡಿಸಿಕೊಂಡಿದ್ದಾರೆ. ಅವರಿಬ್ಬರೂ ಬಂದು ಇಲ್ಲೇ ಠಿಕಾಣಿ ಹಾಕಲಿ. ಎಲ್ಲವನ್ನೂ ಎದುರಿಸುವ ಶಕ್ತಿ ಕಾರ್ಯಕರ್ತರಿಗೆಇದೆ. ಮುಂದಿನ ಚುನಾವಣೆಯನ್ನೂ ಸವಾಲಾಗಿ ಸ್ವೀಕರಿಸಿ, ಎದುರಿಸುತ್ತೇವೆ’ ಎಂದು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.