ಮತ್ತೊಬ್ಬ ಯುವಕ ಮನು ಮೃತದೇಹ ಹುಡುಕಾಟಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಈ ನಡುವೆ ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ ₹ 1 ಲಕ್ಷ ಪರಿಹಾರ ಘೋಷಣೆ ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣ, ರಾಜ್ಯ ಸರ್ಕಾರ ತಲಾ ₹ 5 ಲಕ್ಷ ನೀಡುವಂತೆ ಒತ್ತಾಯಿಸಿದ್ದಾರೆ.
ಮಂಗಳೂರಿನಿಂದ ಬಂದ ಎನ್ ಡಿ ಆರ್ ಎಫ್ ತಂಡ ಬೆಳಗ್ಗೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಮೊದಲು ರತನ್ ಶವ ಸಿಕ್ಕಿತ್ತು. ಅದಾದ ಕೆಲ ಹೊತ್ತಿನಲ್ಲಿ ಭೀಮ್ ರಾಜ್ ಮೃತದೇಹವೂ ಪತ್ತೆಯಾಯಿತು.