‘ಜೆಡಿಎಸ್ನಿಂದ ಮೂವರು, ಬಿಜೆಪಿಯಿಂದ ಒಬ್ಬರು ಸೇರಿ, ಕಣಕ್ಕಿಳಿದಿರುವ ನಾಲ್ವರಲ್ಲಿ ಯಾರೂ ಗೆಲ್ಲಲು ಸಾಧ್ಯವಿಲ್ಲ. ಬಿಜೆಪಿ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. ಇವರು ನನ್ನನ್ನೇ ಬಿಟ್ಟಿಲ್ಲ, ಇನ್ನು ನಿಮ್ಮನ್ನು ಬಿಡುತ್ತಾರೆಯೇ? ಪ್ರೀತಂಗೌಡರೇ (ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ), ಚುನಾವಣೆ ಕಳೆದ ಮೇಲೆ ನಿಮ್ಮನ್ನು ಸಮಾಧಿ ಮಾಡಿಬಿಡುತ್ತಾರೆ. ಬಿಜೆಪಿ ಶಾಸಕರಾದ ಸಿಮೆಂಟ್ ಮಂಜು, ಎಚ್.ಕೆ. ಸುರೇಶ್ ನಿಮ್ಮನ್ನು ಬಿಡುವುದಿಲ್ಲ. ಕಡೂರಿನ ಮಾಜಿ ಶಾಸಕ, ಬಿಜೆಪಿಯ ಬೆಳ್ಳಿ ಪ್ರಕಾಶ್ ಅವರ ಬಳಿ ಚುನಾವಣೆ ಮುಗಿದ ಮೇಲೆ ಬೆಳ್ಳಿನೂ ಇರಲ್ಲ, ಚಿನ್ನಾನೂ ಇರಲ್ಲ’ ಎಂದು ಎಚ್ಚರಿಕೆ ನೀಡಿದರು.