ಹಾಸನ: ಹೇಮಾವತಿ, ಯಗಚಿ ಹಾಗೂ ವಾಟೆಹೊಳೆ ಜಲಾಶಯ ಯೋಜನಾ ನಿರಾಶ್ರಿತರ ಭೂ ಮಂಜುರಾತಿಗೆ ಸಂಭಂದಿಸಿದಂತೆ 2005 ರಿಂದ 2019ರವರೆಗಿನ ಬಾಕಿ ಇರುವ ಎಲ್ಲ ಪ್ರಕರಣಗಳ ವಿಚಾರಣೆಯನ್ನು ತಿಂಗಳಲ್ಲಿ ಪೂರ್ಣಗೊಳಿಸಬೇಕು. ತಪ್ಪಿತಸ್ಥ ಅಧಿಕಾರಿ, ಸಿಬ್ಬಂದಿ ವಿರುದ್ಧ 15 ದಿನಗಳೊಳಗೆ ಕ್ರಮ ಜರುಗಿಸಿ, ವರದಿ ನೀಡುವಂತೆ ಕಂದಾಯ ಇಲಾಖೆ ಪುನರ್ವಸತಿ ಮುತ್ತು ಪುನರ್ ನಿರ್ಮಾಣ ಆಯುಕ್ತ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್ ಸೂಚನೆ ನೀಡಿದರು.