<p><strong>ಆಲೂರು</strong>: ತಾಲ್ಲೂಕಿನ ಕರಿಗೌಡನಹಳ್ಳಿ ಗ್ರಾಮದ ಸಮೀಪ ಹೇಮಾವತಿ ನದಿಗೆ ಅಡ್ಡಲಾಗಿ ಕೆಆರ್ಡಿಸಿಎಲ್ನಿಂದ ನಿರ್ಮಿಸಿದ ಹೊಸ ಸೇತುವೆ ಕಾಮಗಾರಿ ಮುಗಿದು ಎರಡು ವರ್ಷಗಳಾದರೂ ಸಂಚಾರಕ್ಕೆ ಅನುಕೂಲವಾಗದೇ ನನೆಗುದ್ದಿಗೆ ಬಿದ್ದಿದೆ.</p>.<p>ತಾಲ್ಲೂಕಿನ ಕರಿಗೌಡನಹಳ್ಳಿ, ಚಾಕನಹಳ್ಳಿ, ಹಸಗನೂರು, ಹಾಸನ ತಾಲ್ಲೂಕಿನ ಬಳ್ಳೆಕೆರೆ, ಮಲ್ಲಿಗೆವಾಳು, ದುಂಡನಾಯಕನಹಳ್ಳಿ ಗ್ರಾಮಸ್ಥರ ಜಮೀನು ಸೇತುವೆ ಇಕ್ಕೆಲಗಳಲ್ಲಿದ್ದರೂ, ಮಳೆಗಾಲದಲ್ಲಿ ಹೇಮವಾತಿ ಜಲಾಶಯ ತುಂಬಿದ ಸಂದರ್ಭದಲ್ಲಿ ತೆಪ್ಪ ಬಳಸಿ, ಜೀವ ಕೈಯಲ್ಲಿ ಹಿಡಿದು ಓಡಾಡಬೇಕಾದ ಅನಿವಾರ್ಯತೆ ಎದುರಾಗಿದೆ.</p>.<p>ಆಲೂರು, ಹಾಸನ ಮತ್ತು ಅರಕಲಗೂಡು ತಾಲ್ಲೂಕುಗಳ ಸಂಬಂಧ ಬೆಸೆಯುವ ಮತ್ತು ಮಡಿಕೇರಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ.</p>.<p>ವಾಹನಗಳಲ್ಲಿ ತೆರಳಬೇಕಾದರೆ ಸುಮಾರು 40 ಕಿ.ಮೀ.ಗಳಿಗೂ ಅಧಿಕ ದೂರ ಕ್ರಮಿಸಿ ಜಮೀನಿಗೆ ತಲುಪಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆಲೂರು ತಾಲ್ಲೂಕು ಭಾಗದ ಜನರು ಗೊರೂರು, ಅರಕಲಗೂಡು, ಹೊಳೆನರಸೀಪುರ, ಮಡಿಕೇರಿ ಜಿಲ್ಲೆ ಸೇರಿದಂತೆ ಈ ಭಾಗಗಳಿಗೆ ತೆರಳಲು ಸುಮಾರು 50-60 ಕಿ.ಮೀ. ಕ್ರಮಿಸಬೇಕಾಗಿದೆ.</p>.<p>ಇಲ್ಲಿ ಸೇತುವ ನಿರ್ಮಾಣ ಮಾಡಬೇಕೆಂದು ನಾಲ್ಕು ಐದು ದಶಕಗಳಿಂದ ಹೋರಾಟ ನಡೆಯುತ್ತಲೇ ಇತ್ತು. ಎಚ್.ಕೆ. ಕುಮಾರಸ್ವಾಮಿ ಶಾಸಕರಾಗಿದ್ದ ಸಂದರ್ಭದಲ್ಲಿ ಸುಮಾರು ₹16 ಕೋಟಿ ವೆಚ್ಚದಲ್ಲಿ ಕೆ.ಆರ್.ಡಿ.ಸಿ.ಎಲ್. ನಿಂದ ಕಾಮಗಾರಿ ನಿರ್ವಹಿಸಿ ಸೇತುವ ಕಾಮಗಾರಿ ಪೂರ್ಣಗೊಳಿಸಲಾಗಿದೆ.</p>.<p>ಕೆಲ ಅಡೆತಡೆಗಳನ್ನು ಮುಗಿಸಿ ಲೋಕಾರ್ಪಣೆ ಮಾಡಬೇಕು ಎನ್ನುವಷ್ಟರಲ್ಲಿ ರಸ್ತೆಗೆ ಅಗತ್ಯವಿರುವ ಜಾಗದ ಬಗ್ಗೆ ಕೆಲವು ತೊಡಕುಗಳು ಎದುರಾದವು. ತೊಡಕು ಸರಿಪಡಿಸುವಷ್ಟರಲ್ಲಿ ವಿಧಾನಸಭೆ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿದ್ದರಿಂದ ಮುಂದಿನ ಕಾಮಗಾರಿ ನನೆಗುದಿಗೆ ಬಿದ್ದಿದೆ.</p>.<div><blockquote>ಶಾಸಕ ಸಿಮೆಂಟ್ ಮಂಜು ಜಮೀನು ಮಾಲೀಕರ ಮನವೊಲಿಸಿ ಅಡಚಣೆ ನಿವಾರಿಸಿದ್ದು ಸೇತುವೆ ಇಕ್ಕೆಲಗಳಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಿದೆ</blockquote><span class="attribution">ವೆಂಕಟಲಕ್ಷ್ಮಿ ಕೆಆರ್ಡಿಸಿಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್</span></div>.<div><blockquote>ಸೇತುವೆ ಇಕ್ಕೆಲಗಳಲ್ಲಿರುವ ಜಮೀನಿಗೆ ತೆರಳಲು 40 ಕಿ.ಮೀ. ದೂರ ಕ್ರಮಿಸಬೇಕಾಗಿದೆ. ರಸ್ತೆ ನಿರ್ಮಾಣ ಪ್ರಾರಂಭವಾಗಿದ್ದು ಶೀಘ್ರ ಸಂಚಾರಕ್ಕೆ ಅನುಕೂಲ ಮಾಡಬೇಕು</blockquote><span class="attribution">ಕೃಷ್ಣೇಗೌಡ ಕರಿಗೌಡನಹಳ್ಳಿ ನಿವೃತ್ತ ನೌಕರ</span></div>.<div><blockquote>ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆಲವು ತೊಡಕು ನಿವಾರಣೆ ಮಾಡಿ ರಸ್ತೆ ಕಾಮಗಾರಿ ಪ್ರಾರಂಭಿಸಲಾಗಿದೆ. ಮಳೆಗಾಲದ ನಂತರ ಕಾಮಗಾರಿ ಪೂರ್ಣಗೊಳಿಸಲಾಗುವುದು</blockquote><span class="attribution">ಸಿಮೆಂಟ್ ಮಂಜು ಶಾಸಕರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲೂರು</strong>: ತಾಲ್ಲೂಕಿನ ಕರಿಗೌಡನಹಳ್ಳಿ ಗ್ರಾಮದ ಸಮೀಪ ಹೇಮಾವತಿ ನದಿಗೆ ಅಡ್ಡಲಾಗಿ ಕೆಆರ್ಡಿಸಿಎಲ್ನಿಂದ ನಿರ್ಮಿಸಿದ ಹೊಸ ಸೇತುವೆ ಕಾಮಗಾರಿ ಮುಗಿದು ಎರಡು ವರ್ಷಗಳಾದರೂ ಸಂಚಾರಕ್ಕೆ ಅನುಕೂಲವಾಗದೇ ನನೆಗುದ್ದಿಗೆ ಬಿದ್ದಿದೆ.</p>.<p>ತಾಲ್ಲೂಕಿನ ಕರಿಗೌಡನಹಳ್ಳಿ, ಚಾಕನಹಳ್ಳಿ, ಹಸಗನೂರು, ಹಾಸನ ತಾಲ್ಲೂಕಿನ ಬಳ್ಳೆಕೆರೆ, ಮಲ್ಲಿಗೆವಾಳು, ದುಂಡನಾಯಕನಹಳ್ಳಿ ಗ್ರಾಮಸ್ಥರ ಜಮೀನು ಸೇತುವೆ ಇಕ್ಕೆಲಗಳಲ್ಲಿದ್ದರೂ, ಮಳೆಗಾಲದಲ್ಲಿ ಹೇಮವಾತಿ ಜಲಾಶಯ ತುಂಬಿದ ಸಂದರ್ಭದಲ್ಲಿ ತೆಪ್ಪ ಬಳಸಿ, ಜೀವ ಕೈಯಲ್ಲಿ ಹಿಡಿದು ಓಡಾಡಬೇಕಾದ ಅನಿವಾರ್ಯತೆ ಎದುರಾಗಿದೆ.</p>.<p>ಆಲೂರು, ಹಾಸನ ಮತ್ತು ಅರಕಲಗೂಡು ತಾಲ್ಲೂಕುಗಳ ಸಂಬಂಧ ಬೆಸೆಯುವ ಮತ್ತು ಮಡಿಕೇರಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ.</p>.<p>ವಾಹನಗಳಲ್ಲಿ ತೆರಳಬೇಕಾದರೆ ಸುಮಾರು 40 ಕಿ.ಮೀ.ಗಳಿಗೂ ಅಧಿಕ ದೂರ ಕ್ರಮಿಸಿ ಜಮೀನಿಗೆ ತಲುಪಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆಲೂರು ತಾಲ್ಲೂಕು ಭಾಗದ ಜನರು ಗೊರೂರು, ಅರಕಲಗೂಡು, ಹೊಳೆನರಸೀಪುರ, ಮಡಿಕೇರಿ ಜಿಲ್ಲೆ ಸೇರಿದಂತೆ ಈ ಭಾಗಗಳಿಗೆ ತೆರಳಲು ಸುಮಾರು 50-60 ಕಿ.ಮೀ. ಕ್ರಮಿಸಬೇಕಾಗಿದೆ.</p>.<p>ಇಲ್ಲಿ ಸೇತುವ ನಿರ್ಮಾಣ ಮಾಡಬೇಕೆಂದು ನಾಲ್ಕು ಐದು ದಶಕಗಳಿಂದ ಹೋರಾಟ ನಡೆಯುತ್ತಲೇ ಇತ್ತು. ಎಚ್.ಕೆ. ಕುಮಾರಸ್ವಾಮಿ ಶಾಸಕರಾಗಿದ್ದ ಸಂದರ್ಭದಲ್ಲಿ ಸುಮಾರು ₹16 ಕೋಟಿ ವೆಚ್ಚದಲ್ಲಿ ಕೆ.ಆರ್.ಡಿ.ಸಿ.ಎಲ್. ನಿಂದ ಕಾಮಗಾರಿ ನಿರ್ವಹಿಸಿ ಸೇತುವ ಕಾಮಗಾರಿ ಪೂರ್ಣಗೊಳಿಸಲಾಗಿದೆ.</p>.<p>ಕೆಲ ಅಡೆತಡೆಗಳನ್ನು ಮುಗಿಸಿ ಲೋಕಾರ್ಪಣೆ ಮಾಡಬೇಕು ಎನ್ನುವಷ್ಟರಲ್ಲಿ ರಸ್ತೆಗೆ ಅಗತ್ಯವಿರುವ ಜಾಗದ ಬಗ್ಗೆ ಕೆಲವು ತೊಡಕುಗಳು ಎದುರಾದವು. ತೊಡಕು ಸರಿಪಡಿಸುವಷ್ಟರಲ್ಲಿ ವಿಧಾನಸಭೆ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿದ್ದರಿಂದ ಮುಂದಿನ ಕಾಮಗಾರಿ ನನೆಗುದಿಗೆ ಬಿದ್ದಿದೆ.</p>.<div><blockquote>ಶಾಸಕ ಸಿಮೆಂಟ್ ಮಂಜು ಜಮೀನು ಮಾಲೀಕರ ಮನವೊಲಿಸಿ ಅಡಚಣೆ ನಿವಾರಿಸಿದ್ದು ಸೇತುವೆ ಇಕ್ಕೆಲಗಳಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಿದೆ</blockquote><span class="attribution">ವೆಂಕಟಲಕ್ಷ್ಮಿ ಕೆಆರ್ಡಿಸಿಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್</span></div>.<div><blockquote>ಸೇತುವೆ ಇಕ್ಕೆಲಗಳಲ್ಲಿರುವ ಜಮೀನಿಗೆ ತೆರಳಲು 40 ಕಿ.ಮೀ. ದೂರ ಕ್ರಮಿಸಬೇಕಾಗಿದೆ. ರಸ್ತೆ ನಿರ್ಮಾಣ ಪ್ರಾರಂಭವಾಗಿದ್ದು ಶೀಘ್ರ ಸಂಚಾರಕ್ಕೆ ಅನುಕೂಲ ಮಾಡಬೇಕು</blockquote><span class="attribution">ಕೃಷ್ಣೇಗೌಡ ಕರಿಗೌಡನಹಳ್ಳಿ ನಿವೃತ್ತ ನೌಕರ</span></div>.<div><blockquote>ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆಲವು ತೊಡಕು ನಿವಾರಣೆ ಮಾಡಿ ರಸ್ತೆ ಕಾಮಗಾರಿ ಪ್ರಾರಂಭಿಸಲಾಗಿದೆ. ಮಳೆಗಾಲದ ನಂತರ ಕಾಮಗಾರಿ ಪೂರ್ಣಗೊಳಿಸಲಾಗುವುದು</blockquote><span class="attribution">ಸಿಮೆಂಟ್ ಮಂಜು ಶಾಸಕರು</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>