ಆಲೂರು: ಪಟ್ಟಣಗಳ ವ್ಯಾಪ್ತಿಗೆ ಒಳಪಡುತ್ತಿದ್ದ ಹಲವು ಕೆರೆ, ಕಟ್ಟೆಗಳನ್ನು ಮುಚ್ಚಿ ಬಸ್ ನಿಲ್ದಾಣ, ಸಾರ್ವಜನಿಕ ಪಾರ್ಕ್ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕೆರೆ, ಕಟ್ಟೆಗಳನ್ನು ಮುಚ್ಚಿದರೆ ಅಂತರ್ಜಲ ಕಡಿಮೆ ಆಗುವುದು ಒಂದೆಡೆಯಾದರೆ, ಮೇಲಿನ ಪ್ರದೇಶದಿಂದ ಹರಿದು ಬರುವ ನೀರು ಸಂಗ್ರಹವಾಗಲು ಅವಕಾಶವಿಲ್ಲದೆ ತೊಂದರೆಗೆ ಒಳಗಾಗುವಂತಾಗಿದೆ ಎಂದು ಇಲ್ಲಿನ ನಿವಾಸಿಗಳು ದೂರುತ್ತಿದ್ದಾರೆ.