<p><strong>ಹಾಸನ:</strong> ಜಿಲ್ಲೆಯಲ್ಲಿ ಶನಿವಾರ 144 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ<br />25,033ಕ್ಕೆ ಏರಿಕೆಯಾಗಿದೆ.</p>.<p>ಸೋಂಕಿತರಲ್ಲಿ ಮೂರು ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಜ್ವರ, ಉಸಿರಾಟದ ಸಮಸ್ಯೆಯಿಂದ ಜಿಲ್ಲಾ ಕೋವಿಡ್<br />ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅರಸೀಕೆರೆಯ ಒಬ್ಬರು, ಬೇಲೂರು ತಾಲ್ಲೂಕಿನ ಇಬ್ಬರು ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಈವರೆಗೆ<br />ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 428 ತಲುಪಿದೆ.</p>.<p>1047 ಸೋಂಕಿತರು ಜಿಲ್ಲಾ ಕೋವಿಡ್ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರ, ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ<br />ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 38 ಮಂದಿ ದಾಖಲಾಗಿದ್ದಾರೆ. ಭಾನುವಾರ ಬಿಡುಗಡೆಯಾದ 210 ಜನ ಸೇರಿದಂತೆ ಈವರೆಗೆ 23,558 ಮಂದಿ ಚೇತರಿಸಿಕೊಂಡಿದ್ದಾರೆ.</p>.<p>ಹೊಸದಾಗಿ ಆಲೂರು 13, ಅರಕಲಗೂಡು 7, ಅರಸೀಕೆರೆ 11, ಬೇಲೂರು 15, ಚನ್ನರಾಯಪಟ್ಟಣ 35, ಹಾಸನ 46, ಹೊಳೆನರಸೀಪುರ 13, ಸಕಲೇಶಪುರ 4 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಜಿಲ್ಲೆಯಲ್ಲಿ ಶನಿವಾರ 144 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ<br />25,033ಕ್ಕೆ ಏರಿಕೆಯಾಗಿದೆ.</p>.<p>ಸೋಂಕಿತರಲ್ಲಿ ಮೂರು ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಜ್ವರ, ಉಸಿರಾಟದ ಸಮಸ್ಯೆಯಿಂದ ಜಿಲ್ಲಾ ಕೋವಿಡ್<br />ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅರಸೀಕೆರೆಯ ಒಬ್ಬರು, ಬೇಲೂರು ತಾಲ್ಲೂಕಿನ ಇಬ್ಬರು ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಈವರೆಗೆ<br />ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 428 ತಲುಪಿದೆ.</p>.<p>1047 ಸೋಂಕಿತರು ಜಿಲ್ಲಾ ಕೋವಿಡ್ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರ, ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ<br />ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 38 ಮಂದಿ ದಾಖಲಾಗಿದ್ದಾರೆ. ಭಾನುವಾರ ಬಿಡುಗಡೆಯಾದ 210 ಜನ ಸೇರಿದಂತೆ ಈವರೆಗೆ 23,558 ಮಂದಿ ಚೇತರಿಸಿಕೊಂಡಿದ್ದಾರೆ.</p>.<p>ಹೊಸದಾಗಿ ಆಲೂರು 13, ಅರಕಲಗೂಡು 7, ಅರಸೀಕೆರೆ 11, ಬೇಲೂರು 15, ಚನ್ನರಾಯಪಟ್ಟಣ 35, ಹಾಸನ 46, ಹೊಳೆನರಸೀಪುರ 13, ಸಕಲೇಶಪುರ 4 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>