ಈ ವೇಳೆ ಸುರೇಶ್ ಸುದ್ದಿಗಾರ ರೊಂದಿಗೆ ಮಾತನಾಡಿ, ‘ಕೋವಿಡ್ 3ನೇ ಅಲೆ ಬರಲಿದೆ ಎಂದು ಭಯ ಪಡಿಸಿಎಲ್ಲರೂ ಲಸಿಕೆ ಪಡೆಯಿರಿ ಎಂದು ಹೇಳಲಾಗುತ್ತಿದೆ. ಆದರೆ ಅಗತ್ಯ ಇರುವಷ್ಟು ಪ್ರಮಾಣದಲ್ಲಿ ಲಸಿಕೆ ಲಭ್ಯವಿಲ್ಲ. ನಿತ್ಯ ಬಂದು ಸಾಲಿನಲ್ಲಿ ನಿಂತು ಕಾಯಲು ಆಗುತ್ತಿಲ್ಲ. ಸರ್ಕಾರಕ್ಕೆ ನಿಜವಾಗಿಯೂ ಕಾಳಜಿಇದ್ದರೆ ಮನೆ ಮನೆಗೆ ಹೋಗಿ ಲಸಿಕೆ ನೀಡಬೇಕು. ಅದನ್ನು ಬಿಟ್ಟು ಸಾಲಿನಲ್ಲಿ ನಿಂತರೂ ಲಸಿಕೆ ಇಲ್ಲ ಎಂದು ಕಳಿಸುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.