<p><strong>ಹಾಸನ:</strong> ಕ್ರಾಂತಿಕಾರಿ ಬಸವಣ್ಣನ ಪ್ರತಿಮೆ ಭಗ್ನಗೊಳಿಸಿರುವ ಕಿಡಿಗೇಡಿಗಳನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ<br />ವೀರಶೈವ ಲಿಂಗಾಯಿತ ಯುವ ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು<br />ಪ್ರತಿಭಟನೆ ನಡೆಸಿದರು.</p>.<p>ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಬಿಚಗುಪ್ಪಿ ಗ್ರಾಮದಲ್ಲಿ ಬಸವಣ್ಣವರ ಪ್ರತಿಮೆಯನ್ನು ನಾಲ್ಕು ದಿನಗಳ ಹಿಂದೆ<br />ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. ಆಯುಧದಿಂದ ಹೊಡೆದು ಕೈ ಕತ್ತರಿಸಲಾಗಿದೆ. ಸಮಾಜ ಸುಧಾರಕ, ವಚನಕಾರ, ಜಾತಿ ಪದ್ಧತಿ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ ಮಾನವತಾವಾದಿಗೆ ಮಾಡಿರುವ ದೊಡ್ಡ ಅವಮಾನ ಇದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಸವಣ್ಣ 12ನೇ ಶತಮಾನ ಕಂಡ ಶ್ರೇಷ್ಠ ನಾಯಕ. ಇಂದಿಗೂ ಅವರ ವಚನಗಳು ಬದುಕಿಗೆ ದಾರಿ ದೀಪವಾಗಿದೆ. ಇಂತಹ ವ್ಯಕ್ತಿಗೆ ಅವಮಾನ ಮಾಡುವುದು ಖಂಡನೀಯ ಎಂದರು.</p>.<p>ವೀರಶೈವ ಲಿಂಗಾಯಿತ ಯುವ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಅವಿನಾಶ್, ಉಪಾಧ್ಯಕ್ಷ ಶರತ್ ಭೂಷಣ್, ಕಾರ್ಯದರ್ಶಿ ವೀರೇಶ್ ಕುಮಾರ್,, ಗೌರವಾಧ್ಯಕ್ಷ ಎಚ್,ಎನ್.ನಾಗೇಶ್, ಬಿ.ಎಚ್.ರೇಣುಕುಮಾರ್, ರಾಜು, ದಿಲೀಪ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಕ್ರಾಂತಿಕಾರಿ ಬಸವಣ್ಣನ ಪ್ರತಿಮೆ ಭಗ್ನಗೊಳಿಸಿರುವ ಕಿಡಿಗೇಡಿಗಳನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ<br />ವೀರಶೈವ ಲಿಂಗಾಯಿತ ಯುವ ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು<br />ಪ್ರತಿಭಟನೆ ನಡೆಸಿದರು.</p>.<p>ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಬಿಚಗುಪ್ಪಿ ಗ್ರಾಮದಲ್ಲಿ ಬಸವಣ್ಣವರ ಪ್ರತಿಮೆಯನ್ನು ನಾಲ್ಕು ದಿನಗಳ ಹಿಂದೆ<br />ದುಷ್ಕರ್ಮಿಗಳು ವಿರೂಪಗೊಳಿಸಿದ್ದಾರೆ. ಆಯುಧದಿಂದ ಹೊಡೆದು ಕೈ ಕತ್ತರಿಸಲಾಗಿದೆ. ಸಮಾಜ ಸುಧಾರಕ, ವಚನಕಾರ, ಜಾತಿ ಪದ್ಧತಿ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ ಮಾನವತಾವಾದಿಗೆ ಮಾಡಿರುವ ದೊಡ್ಡ ಅವಮಾನ ಇದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಬಸವಣ್ಣ 12ನೇ ಶತಮಾನ ಕಂಡ ಶ್ರೇಷ್ಠ ನಾಯಕ. ಇಂದಿಗೂ ಅವರ ವಚನಗಳು ಬದುಕಿಗೆ ದಾರಿ ದೀಪವಾಗಿದೆ. ಇಂತಹ ವ್ಯಕ್ತಿಗೆ ಅವಮಾನ ಮಾಡುವುದು ಖಂಡನೀಯ ಎಂದರು.</p>.<p>ವೀರಶೈವ ಲಿಂಗಾಯಿತ ಯುವ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಅವಿನಾಶ್, ಉಪಾಧ್ಯಕ್ಷ ಶರತ್ ಭೂಷಣ್, ಕಾರ್ಯದರ್ಶಿ ವೀರೇಶ್ ಕುಮಾರ್,, ಗೌರವಾಧ್ಯಕ್ಷ ಎಚ್,ಎನ್.ನಾಗೇಶ್, ಬಿ.ಎಚ್.ರೇಣುಕುಮಾರ್, ರಾಜು, ದಿಲೀಪ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>