<p><strong>ಅರಸೀಕೆರೆ</strong>: ನಗರದ ಸುಬ್ರಹ್ಮಣ್ಯ ನಗರದಲ್ಲಿ ತಮಿಳುನಾಡಿನ ಹೊಸೂರಿನಲ್ಲಿ ನಿರ್ಮಾಣವಾದ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿದ್ದು ವಿಶೇಷ ಎನಿಸಿದೆ.</p>.<p>ಇಲ್ಲಿ ಕಳೆದ 17 ವರ್ಷಗಳಿಂದ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದೆ. ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶಿಲ್ಪಿ ಹಾರನಹಳ್ಳಿ ಮಹದೇವ್ ಹಾಗೂ ಇತರರು ಒಂದೇ ಶೈಲಿ ಮೂರ್ತಿ ತಯಾರಿಸುತ್ತಾರೆ. ಅದಕ್ಕಾಗಿ ಮೂರ್ತಿ ವಿಶೇಷವಾಗಿರಬೇಕು ಎಂಬ ವಿಚಾರದಿಂದ ತಮಿಳುನಾಡಿನ ಹೊಸೂರಿನಲ್ಲಿ ನಿರ್ಮಾಣವಾದ ₹ 60 ಸಾವಿರ ವೆಚ್ಚದ ಗಣಪತಿ ಮೂರ್ತಿ ಕೂರಿಸಿದ್ದು ನೋಡಲು ಸುಂದರ ಹಾಗೂ ವಿಶೇಷವಾಗಿದೆ.</p>.<p>‘ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಶ್ರೀ ವಿದ್ಯಾ ಗಣಪತಿ ಆಸ್ಥಾನ ಮಂಟಪದಲ್ಲಿ 10 ಅಡಿಯ ಆಕರ್ಷಕ ಗಣಪತಿ ಪ್ರತಿಷ್ಠಾಪಿಸಿದ್ದು ಕಿರೀಟದ ಮೇಲೆ ಕೃಷ್ಣ ಪರಮಾತ್ಮ ಇದ್ದು ಮೂರ್ತಿ ಜನರ ಕಣ್ಮನ ಸೆಳೆಯುತ್ತಿದೆ. ಅಲ್ಲದೇ ಜಿಲ್ಲೆಯ ಬೇರೆಡೆ ಈ ತರಹದ ಮೂರ್ತಿ ಪ್ರತಿಷ್ಠಾಪಿಸಿಲ್ಲ’ ಎನ್ನುತ್ತಾರೆ ರುದ್ರಾಕ್ಷಿ ಫೌಂಡೇಷನ್ನ ಜಯಪ್ರಕಾಶ್ ಗುರೂಜಿ.</p>.<p>ಸುಬ್ರಹ್ಮಣ್ಯ ನಗರದ 4ನೇ ಅಡ್ಡರಸ್ತೆಯಲ್ಲಿರುವ ಗಣಪತಿ ಮೂರ್ತಿ ನೋಡಲು ನಗರದ ಜನತೆ ಮುಗಿ ಬಿದ್ದಿದ್ದಾರೆ. ಸೆ. 19ರಂದು ವಿವಿಧ ಕಲಾ ತಂಡಗಳೊಂದಿಗೆ ವಿಸರ್ಜನಾ ಮಹೋತ್ಸವ ಹಮ್ಮಿಕೊಳ್ಳಲಾಗಿದ್ದು ಕ್ರೇನ್ ಮೂಲಕ ಮೆರವಣಿಗೆ ನಡೆಸಿ ವಿಸರ್ಜಿಸಲಾಗುತ್ತದೆ ಎಂದು ಭಕ್ತ ಮಂಡಳಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ</strong>: ನಗರದ ಸುಬ್ರಹ್ಮಣ್ಯ ನಗರದಲ್ಲಿ ತಮಿಳುನಾಡಿನ ಹೊಸೂರಿನಲ್ಲಿ ನಿರ್ಮಾಣವಾದ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿದ್ದು ವಿಶೇಷ ಎನಿಸಿದೆ.</p>.<p>ಇಲ್ಲಿ ಕಳೆದ 17 ವರ್ಷಗಳಿಂದ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದೆ. ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶಿಲ್ಪಿ ಹಾರನಹಳ್ಳಿ ಮಹದೇವ್ ಹಾಗೂ ಇತರರು ಒಂದೇ ಶೈಲಿ ಮೂರ್ತಿ ತಯಾರಿಸುತ್ತಾರೆ. ಅದಕ್ಕಾಗಿ ಮೂರ್ತಿ ವಿಶೇಷವಾಗಿರಬೇಕು ಎಂಬ ವಿಚಾರದಿಂದ ತಮಿಳುನಾಡಿನ ಹೊಸೂರಿನಲ್ಲಿ ನಿರ್ಮಾಣವಾದ ₹ 60 ಸಾವಿರ ವೆಚ್ಚದ ಗಣಪತಿ ಮೂರ್ತಿ ಕೂರಿಸಿದ್ದು ನೋಡಲು ಸುಂದರ ಹಾಗೂ ವಿಶೇಷವಾಗಿದೆ.</p>.<p>‘ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಶ್ರೀ ವಿದ್ಯಾ ಗಣಪತಿ ಆಸ್ಥಾನ ಮಂಟಪದಲ್ಲಿ 10 ಅಡಿಯ ಆಕರ್ಷಕ ಗಣಪತಿ ಪ್ರತಿಷ್ಠಾಪಿಸಿದ್ದು ಕಿರೀಟದ ಮೇಲೆ ಕೃಷ್ಣ ಪರಮಾತ್ಮ ಇದ್ದು ಮೂರ್ತಿ ಜನರ ಕಣ್ಮನ ಸೆಳೆಯುತ್ತಿದೆ. ಅಲ್ಲದೇ ಜಿಲ್ಲೆಯ ಬೇರೆಡೆ ಈ ತರಹದ ಮೂರ್ತಿ ಪ್ರತಿಷ್ಠಾಪಿಸಿಲ್ಲ’ ಎನ್ನುತ್ತಾರೆ ರುದ್ರಾಕ್ಷಿ ಫೌಂಡೇಷನ್ನ ಜಯಪ್ರಕಾಶ್ ಗುರೂಜಿ.</p>.<p>ಸುಬ್ರಹ್ಮಣ್ಯ ನಗರದ 4ನೇ ಅಡ್ಡರಸ್ತೆಯಲ್ಲಿರುವ ಗಣಪತಿ ಮೂರ್ತಿ ನೋಡಲು ನಗರದ ಜನತೆ ಮುಗಿ ಬಿದ್ದಿದ್ದಾರೆ. ಸೆ. 19ರಂದು ವಿವಿಧ ಕಲಾ ತಂಡಗಳೊಂದಿಗೆ ವಿಸರ್ಜನಾ ಮಹೋತ್ಸವ ಹಮ್ಮಿಕೊಳ್ಳಲಾಗಿದ್ದು ಕ್ರೇನ್ ಮೂಲಕ ಮೆರವಣಿಗೆ ನಡೆಸಿ ವಿಸರ್ಜಿಸಲಾಗುತ್ತದೆ ಎಂದು ಭಕ್ತ ಮಂಡಳಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>