ನಳಿನ್ ಕುಮಾರ್ ಕಟೀಲ್ ಮಾತನಾಡಿ, ಹಾಸನ–ಮಂಗಳೂರು ರಸ್ತೆ ಕಾಮಗಾರಿ ಬಗ್ಗೆ ಕೇಂದ್ರ ಸಚಿವ ನಿತಿನ್ಗಡ್ಕರಿ ಜತೆ ಚರ್ಚಿಸಲಾಗಿದೆ. ಗುತ್ತಿಗೆ ಪಡೆದವರು ಕಾಮಗಾರಿ ಪೂರ್ಣಗೊಳಿಸದ ಕಾರಣ ಉಪಗುತ್ತಿಗೆದಾರರಿಗೆ ಪೂರ್ಣ ಪ್ರಮಾಣದ ಕಾಮಗಾರಿ ವಹಿಸಲಾಗುತ್ತಿದೆ. ಮಳೆಗಾಲದಲ್ಲಿ ಹಾನಿಗೊಳಗಾಗಿದ್ದರಸ್ತೆಗಳ ಗುಂಡಿ ಮುಚ್ಚುವ ಕಾರ್ಯ 20 ದಿನದೊಳಗೆ ಪೂರ್ಣಗೊಳಿಸಬೇಕು. ಈಗಾಗಲೇ 13 ಕಿ.ಲೋ ಮೀಟರ್ ರಸ್ತೆ ಆಗಿದೆ. ಮಾರನಹಳ್ಳಿ -ಮಂಗಳೂರಿನ ನಡುವೆ ರಸ್ತೆ ಸುರಂಗ ಮಾರ್ಗ ವಿಸ್ತೃತ ಕ್ರಿಯಾ ಯೋಜನೆ ತಯಾರಾಗಿದೆ. ₹10 ಸಾವಿರ ಕೋಟಿ ವೆಚ್ಚದ ಯೋಜನೆಗೆ ಶೀಘ್ರ ಅನುಮೋದನೆ ದೊರೆಯುವ ನಿರೀಕ್ಷೆ ಇದೆಎಂದು ಹೇಳಿದರು.