ಆನೆಗಳ ಕಾಳಗದಲ್ಲಿ ಅಂಬಾರಿ ಆನೆ ಅರ್ಜುನ, ಕಾಡಾನೆ ದಾಳಿಯಿಂದ ಮೃತಪಟ್ಟಿತ್ತು. ಮೃತಪಡುವ ಮುನ್ನ ಅರ್ಜುನನ ಕಾಲಿಗೆ ಗುಂಡೇಟು ತಗುಲಿತ್ತು. ಇನ್ನೊಂದು ಸಾಕಾನೆ ಪ್ರಶಾಂತ್ಗೆ ಅರಿವಳಿಕೆ ಚುಚ್ಚುಮದ್ದು ಬಿದ್ದಿತ್ತು ಎಂಬ ಆರೋಪಗಳು ಕೇಳಿ ಬಂದಿದ್ದವು. ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ತನಿಖೆ ನಡೆಸಲು ತಂಡವನ್ನು ರಚಿಸಿದ್ದರು.