ಮಂಗಳವಾರ, ಮಾರ್ಚ್ 28, 2023
31 °C
ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಸದಾಶಿವ ಆಯೋಗದ ವರದಿ ಜಾರಿಗೊಳಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಒಳಮೀಸಲಾತಿ ಅನುಷ್ಠಾನ ಕುರಿತು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿ
ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಎಲ್ಲಾ ಸಮುದಾಯಗಳಿಗೂ ಶಿಕ್ಷಣ, ಉದ್ಯೋಗ, ರಾಜಕೀಯ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಸಮಾನತೆ ಇರಬೇಕು. ಜನರ ಬದುಕಿನಲ್ಲಿ ಶಾಂತಿ ನೆಲೆಸಬೇಕೆಂದು ಬಿ.ಆರ್‌. ಅಂಬೇಡ್ಕರ್‌ ಹೇಳಿದ್ದರು. ಆದರೆ, ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಮರ್ಪಕವಾಗಿ ಮತ್ತು ನ್ಯಾಯಯುತವಾಗಿ ಹಂಚಿಕೆಯಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಆಗಸ್ಟ್‌ 27ರಂದು ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠವು ಐತಿಹಾಸಿಕ ತೀರ್ಪು ನೀಡಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಇದ್ದ ಅಡತಡೆಗಳು ನಿವಾರಣೆ ಆಗಿದೆ. ಈ ತಿಂಗಳು ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಮಿತಿ ಜಿಲ್ಲಾ ಸಂಚಾಲಕರಾದ ಗೋವಿದರಾಜು ದಿಂಡಗೂರು, ಮಂಜುನಾಥ ಕುರುವಂಕ, ತಾಲ್ಲೂಕು
ಸಂಚಾಲಕರಾದ ಕೆ.ಟಿ. ಲಕ್ಷ್ಮಯ್ಯ, ರವೇಶ್‌ ಉಳ್ಳಾವಳ್ಳಿ, ಕೇಶವ ಮೂರ್ತಿ ಕಬ್ಬಳ್ಳಿ, ರವಿಕುಮಾರ್‌, ಸಿ.ಎನ್‌. ಮಂಜುನಾಥ್‌, ಮಧು ಹಿರೀಸಾವೆ ಭಾಗವಹಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.