ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿ ಮುಖ್ಯಸ್ಥ ಬಿಜೆಪಿಗೆ ಸೇರಲಿ: ಹಾಸನದಲ್ಲಿ ಹರಿಹಾಯ್ದ ಜೆಡಿಎಸ್ ನಾಯಕ ರೇವಣ್ಣ

Last Updated 28 ಮಾರ್ಚ್ 2019, 7:00 IST
ಅಕ್ಷರ ಗಾತ್ರ

ಹಾಸನ: ‘ಆದಾಯ ತೆರಿಗೆ ಇಲಾಖೆಯ ಮುಖ್ಯಸ್ಥರು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ. ಮುಖ್ಯಸ್ಥರ ಸ್ಥಾನಕ್ಕೆ ಅವರು ನಾಲಾಯಕ್’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಎಚ್‌.ಡಿ.ರೇವಣ್ಣ ಹೇಳಿದರು.

ಜೆಡಿಎಸ್‌ ಮುಖಂಡರು ಮತ್ತು ಬೆಂಬಲಿಗರ ಮನೆಗಳ ಮೇಲೆ ಗುರುವಾರ ನಡೆದ ಐಟಿ ದಾಳಿ ಕುರಿತು ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿರುವಐಟಿ ಇಲಾಖೆ ಮುಖ್ಯಸ್ಥರು, ಸರ್ಕಾರಿ ಕೆಲಸ ಬಿಟ್ಟು ಬಿಜೆಪಿಗೆ ಸೇರಿಬಿಡಲಿ’ ಎಂದು ವ್ಯಂಗ್ಯವಾಡಿದರು.

‘ಹೀಗೆಲ್ಲಾ ಮಾಡಿ ನಮ್ಮನ್ನು ಹೆದರಿಸಬಹುದು ಎನ್ನುವುದು ಅವರ ಭ್ರಮೆ. ಇಂಥವನ್ನೆಲ್ಲಾ ಸಾಕಷ್ಟು ನೋಡಿದ್ದೇನೆ. ಬಿಜೆಪಿಗೆ ಕೊನೆಗಾಲ ಸಮೀಪಿಸುತ್ತಿದೆ. ಐಟಿ ದಾಳಿಯಿಂದ ಲೋಕಸಭೆ ಚುನಾವಣೆಯಲ್ಲಿ ನಮಗೆ ಶೇ10ರಷ್ಟು ಮತಗಳು ಹೆಚ್ಚಾಗಲಿವೆ. ಐಟಿ ಇಲಾಖೆ ಮುಖ್ಯಸ್ಥರ ವಿರುದ್ಧ ಸಿಬಿಐ ತನಿಖೆ ಆಗಬೇಕು’ ಎಂದು ಅವರು ಗುಡುಗಿದರು.

ಇನ್ನಷ್ಟು ಸುದ್ದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT