<p><strong>ಹಿರೀಸಾವೆ</strong>: ‘ಶ್ರವಣಬೆಳಗೊಳ ಕ್ಷೇತ್ರದಲ್ಲಿ ನಡೆಯುತ್ತಿರುವ ಕೇಂದ್ರ ಸರ್ಕಾರದ ಜೆಜೆಎಂ ಯೋಜನೆ ಕಾಮಗಾರಿ ಮುಂದಿನ 15 ತಿಂಗಳಲ್ಲಿ ಪೂರ್ಣವಾಗಲಿದೆ’ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಶುಕ್ರವಾರ ಹೇಳಿದರು.</p>.<p>ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ, ಸಂಜೀವಿನಿ ಶೇಡ್, ಶಾಲೆಯಲ್ಲಿನ ರಂಗ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ಮತ್ತು ಪರಿಶಿಷ್ಟ ಜಾತಿ, ಪಂಗಡದವರಿಗೆ ಅಡುಗೆ ಅನಿಲ ಸಿಲಿಂಡರ್, ಹೊಲಿಗೆ ಯಂತ್ರಗಳ ವಿತರಣೆ ಮಾಡಿ ಮಾತನಾಡಿದರು.</p>.<p>‘ಏತ ನೀರಾವರಿ ಮೂಲಕ ಕೆಲವು ಕೆರೆಗಳನ್ನು ತುಂಬಿಸಲಾಗಿದೆ, ಮುಂದಿನ ದಿನಗಳಲ್ಲಿ ಹಿರೀಸಾವೆ, ಮತಿಘಟ್ಟ ಕೆರೆಗೆ ನೀರು ಹರಿಸಲಾಗುವುದು. ಎನ್.ಎಚ್. 75ರ ಪಕ್ಕದ ಸರ್ವಿಸ್ ರಸ್ತೆಗಳು ಮತ್ತು ಆಂಡರ್ ಪಾಸ್ ನಿರ್ಮಾಣ ಮಾಡುವ ಬಗ್ಗೆ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಲಾಗುವುದು’ ಎಂದರು.</p>.<p> ಮುಖಂಡ ರವಿಕುಮಾರ್ ಮಾತನಾಡಿ, ‘ಸಮುದಾಯ ಭವನ ಸೇರಿದಂತೆ ಗ್ರಾಮಕ್ಕೆ ಮೂಲಭೂತ ಸೌಲಭ್ಯ ಒದಗಿಸಲಾಗಿದೆ, ಅವುಗಳ ಬಳಕೆ ಮತ್ತು ನಿರ್ವಹಣೆ ಬಗ್ಗೆ ಗ್ರಾಮಸ್ಥರು ಹೆಚ್ಚಿನ ಜಾವಾಬ್ದಾರಿ ವಹಿಸಬೇಕು’ ಎಂದರು.</p>.<p>ಮುಖಂಡರಾದ ಎಚ್.ಜಿ. ರಾಮಕೃಷ್ಣ, ಮಂಜುನಾಥ್, ಗ್ರಾಮ ಪಂಚಾಯಿತಿ ಪಿಡಿಓ ಸತೀಶ್, ಅಧ್ಯಕ್ಷ ಬೋರಣ್ಣ, ಸದಸ್ಯರಾದ ಮಹೇಶ್, ಲೋಕೇಶ್, ಬಸವರಾಜು, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಲೋಕೇಶ್, ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಮಂಜುನಾಥ್, ಶಿಕ್ಷಕ ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೀಸಾವೆ</strong>: ‘ಶ್ರವಣಬೆಳಗೊಳ ಕ್ಷೇತ್ರದಲ್ಲಿ ನಡೆಯುತ್ತಿರುವ ಕೇಂದ್ರ ಸರ್ಕಾರದ ಜೆಜೆಎಂ ಯೋಜನೆ ಕಾಮಗಾರಿ ಮುಂದಿನ 15 ತಿಂಗಳಲ್ಲಿ ಪೂರ್ಣವಾಗಲಿದೆ’ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಶುಕ್ರವಾರ ಹೇಳಿದರು.</p>.<p>ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ, ಸಂಜೀವಿನಿ ಶೇಡ್, ಶಾಲೆಯಲ್ಲಿನ ರಂಗ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ಮತ್ತು ಪರಿಶಿಷ್ಟ ಜಾತಿ, ಪಂಗಡದವರಿಗೆ ಅಡುಗೆ ಅನಿಲ ಸಿಲಿಂಡರ್, ಹೊಲಿಗೆ ಯಂತ್ರಗಳ ವಿತರಣೆ ಮಾಡಿ ಮಾತನಾಡಿದರು.</p>.<p>‘ಏತ ನೀರಾವರಿ ಮೂಲಕ ಕೆಲವು ಕೆರೆಗಳನ್ನು ತುಂಬಿಸಲಾಗಿದೆ, ಮುಂದಿನ ದಿನಗಳಲ್ಲಿ ಹಿರೀಸಾವೆ, ಮತಿಘಟ್ಟ ಕೆರೆಗೆ ನೀರು ಹರಿಸಲಾಗುವುದು. ಎನ್.ಎಚ್. 75ರ ಪಕ್ಕದ ಸರ್ವಿಸ್ ರಸ್ತೆಗಳು ಮತ್ತು ಆಂಡರ್ ಪಾಸ್ ನಿರ್ಮಾಣ ಮಾಡುವ ಬಗ್ಗೆ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಲಾಗುವುದು’ ಎಂದರು.</p>.<p> ಮುಖಂಡ ರವಿಕುಮಾರ್ ಮಾತನಾಡಿ, ‘ಸಮುದಾಯ ಭವನ ಸೇರಿದಂತೆ ಗ್ರಾಮಕ್ಕೆ ಮೂಲಭೂತ ಸೌಲಭ್ಯ ಒದಗಿಸಲಾಗಿದೆ, ಅವುಗಳ ಬಳಕೆ ಮತ್ತು ನಿರ್ವಹಣೆ ಬಗ್ಗೆ ಗ್ರಾಮಸ್ಥರು ಹೆಚ್ಚಿನ ಜಾವಾಬ್ದಾರಿ ವಹಿಸಬೇಕು’ ಎಂದರು.</p>.<p>ಮುಖಂಡರಾದ ಎಚ್.ಜಿ. ರಾಮಕೃಷ್ಣ, ಮಂಜುನಾಥ್, ಗ್ರಾಮ ಪಂಚಾಯಿತಿ ಪಿಡಿಓ ಸತೀಶ್, ಅಧ್ಯಕ್ಷ ಬೋರಣ್ಣ, ಸದಸ್ಯರಾದ ಮಹೇಶ್, ಲೋಕೇಶ್, ಬಸವರಾಜು, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಲೋಕೇಶ್, ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಮಂಜುನಾಥ್, ಶಿಕ್ಷಕ ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>