ಹಾಸನ: ತಾಲ್ಲೂಕಿನ ಸಾಲಗಾಮೆ ಹೋಬಳಿಯ ಶಂಕದ ಕೊಪ್ಪಲು ಗ್ರಾಮದಲ್ಲಿ ಗಂಡು ಚಿರತೆಯ ಕಳೇಬರ ಪತ್ತೆಯಾಗಿದೆ.
ಗ್ರಾಮದ ನಿವಾಸಿ ಸ್ವಾಮಿಗೌಡ ಅವರ ಜಮೀನಿನ ಬಳಿ ಪತ್ತೆಯಾಗಿರುವ ಚಿರತೆ ವಯಸ್ಸು ಎರಡು ವರ್ಷ ಎಂದು ಅಂದಾಜಿಸಲಾಗಿದ್ದು, ಕಣ್ಣಿನ ಹಾಗೂ ದೇಹದ ಮೇಲೆ ಸಣ್ಣ ಗಾಯದ ಗುರುತು ಕಂಡು ಬಂದಿದ್ಗದು, ಮೂಗಿನಲ್ಲಿ ರಕ್ತ ಸೋರಿಕೆಯಾಗಿದೆ.
ಹಲವು ದಿನಗಳಿಂದ ಗ್ರಾಮದ ವ್ಯಾಪ್ತಿಯಲ್ಲಿ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ ಮೂಡಿಸಿತ್ತು. ಈ ವಿಷಯವನ್ನು ಗ್ರಾಮಸ್ಥರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು.
ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಸ್ಪಷ್ಟ ಕಾರಣ ತಿಳಿಯಲಿದೆ ಎಂದು ಅಧಿಕಾರಿ ತಿಳಿಸಿದರು.