<p><strong>ಚನ್ನರಾಯಪಟ್ಟಣ:</strong> ಜನಸ್ಪಂದನಾ ಸಭೆಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಶೀಲಿಸಿ, ಸಮಸ್ಯೆ ಇತ್ಯರ್ಥಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.</p>.<p>ತಾಲ್ಲೂಕು ಕಚೇರಿ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು, ಸಾಧ್ಯವಿರುವ ಮಟ್ಟಿಗೆ ಅರ್ಜಿಗಳನ್ನು ಪರಿಶೀಲಿಸಿ ಬಗೆಹರಿಸಲಾಗುವುದು. ಇನ್ನು ಕೆಲವು ಅರ್ಜಿಗಳನ್ನು ಬಗೆಹರಿಸಲು ಸ್ವಲ್ಪ ಸಮಯ ಹಿಡಿಯುತ್ತದೆ ಎಂದರು.</p>.<p>ಜನರಿಂದ ಸಲ್ಲಿಕೆಯಾದ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗುವುದು. ತಕ್ಷಣ ಪರಿಹಾರ ಸಿಗದಿದ್ದರೆ ಜನತೆ ನಿರಾಶರಾಗುವುದು ಬೇಡ. ಮುಂದೊಂದು ದಿನ ಅದಕ್ಕೆ ಪರಿಹಾರ ಸಿಗಲಿದೆ. ಕಾನೂನು ಚೌಕಟ್ಟಿನೊಳಗೆ ಕೆಲಸ ಮಾಡಿ ಇತ್ಯರ್ಥ ಪಡಿಸಬೇಕಾಗುತ್ತದೆ ಎಂದರು.</p>.<p>ಜನರಿಂದ ಸಲ್ಲಿಕೆಯಾಗುವ ಅರ್ಜಿಗಳನ್ನು ಸಾಫ್ಟ್ವೇರ್ಗೆ ನೋಂದಾಯಿಸಲಾಗುವುದು. ಜನರಿಂದ ಸಲ್ಲಿಕೆಯಾದ ಅರ್ಜಿಗಳಲ್ಲಿ ಶೇ 90ರಷ್ಟು ಅರ್ಜಿಗಳನ್ನು 30 ದಿನದಲ್ಲಿ ವಿಲೇವಾರಿ ಮಾಡಲಾಗುವುದು. ಕೆಲ ಅರ್ಜಿಗಳ ವಿಲೇವಾರಿ ತಡವಾಗಬಹುದು. ಅರ್ಜಿಗಳಿಗೆ ತಾರ್ಕಿಕ ಅಂತ್ಯ ನೀಡಲಾಗುವುದು ಎಂದರು.</p>.<p>ಹಾಸನ ಬಿಟ್ಟರೆ ಅತ್ಯಂತ ಹೆಚ್ಚು ಅರ್ಜಿಗಳು ಚನ್ನರಾಯಪಟ್ಟಣದಲ್ಲಿ ಸಲ್ಲಿಕೆಯಾಗಿವೆ ಎಂದ ಅವರು, ಜಿಲ್ಲೆಯಲ್ಲಿ ಜಮೀನಿಗೆ ಸಂಬಂಧಿಸಿದಂತೆ 12 ಸಾವಿರ ಪೋಡಿ ದುರಸ್ತಿ ಮಾಡಲಾಗಿದೆ. ಈ ಹಿಂದಿನ 5 ವರ್ಷದಲ್ಲಿ ಕೇವಲ 500 ಪೋಡಿ ದುರಸ್ತಿ ಮಾಡಲಾಗಿತ್ತು. ಮುಂಬರುವ ದಿನಗಳಲ್ಲಿ 25 ಸಾವಿರ ದುರಸ್ತಿ ಮಾಡಲಾಗುವುದು ಎಂದು ತಿಳಿಸಿದರು.</p>.<p>ಶಾಸಕ ಸಿ.ಎನ್. ಬಾಲಕೃಷ್ಣ, ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ತಹಶೀಲ್ದಾರ್ ಕೆ.ಎಸ್. ಶಂಕರಪ್ಪ, ಅರಣ್ಯಾಧಿಕಾರಿ ಸೌರಭ್ಕುಮಾರ್, ಜಿಲ್ಲಾ ಕೆಡಿಪಿ ಸದಸ್ಯ ಎಂ.ಎ. ಗೋಪಾಲಸ್ವಾಮಿ ಭಾಗವಹಿಸಿದ್ದರು.</p>.<div><blockquote>ನಕಾಶೆಯಲ್ಲಿ ರಸ್ತೆ ಇದ್ದರೆ ಮುಲಾಜಿಲ್ಲದೆ ತೆರವುಗೊಳಿಸಿ. ವಸತಿ ಪ್ರದೇಶಗಳಿಗೆ ಕುರಿತಂತೆ ದಾಖಲೆ ಇರುವುದು ಮತ್ತು ಇಲ್ಲದಿರುವ ಬಗ್ಗೆ ತಹಶೀಲ್ದಾರ್ ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲಿಸಬೇಕು </blockquote><span class="attribution">ಕೃಷ್ಣ ಬೈರೇಗೌಡ ಜಿಲ್ಲಾ ಉಸ್ತುವಾರಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ:</strong> ಜನಸ್ಪಂದನಾ ಸಭೆಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಶೀಲಿಸಿ, ಸಮಸ್ಯೆ ಇತ್ಯರ್ಥಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.</p>.<p>ತಾಲ್ಲೂಕು ಕಚೇರಿ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜನಸ್ಪಂದನ ಸಭೆಯಲ್ಲಿ ಮಾತನಾಡಿದ ಅವರು, ಸಾಧ್ಯವಿರುವ ಮಟ್ಟಿಗೆ ಅರ್ಜಿಗಳನ್ನು ಪರಿಶೀಲಿಸಿ ಬಗೆಹರಿಸಲಾಗುವುದು. ಇನ್ನು ಕೆಲವು ಅರ್ಜಿಗಳನ್ನು ಬಗೆಹರಿಸಲು ಸ್ವಲ್ಪ ಸಮಯ ಹಿಡಿಯುತ್ತದೆ ಎಂದರು.</p>.<p>ಜನರಿಂದ ಸಲ್ಲಿಕೆಯಾದ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗುವುದು. ತಕ್ಷಣ ಪರಿಹಾರ ಸಿಗದಿದ್ದರೆ ಜನತೆ ನಿರಾಶರಾಗುವುದು ಬೇಡ. ಮುಂದೊಂದು ದಿನ ಅದಕ್ಕೆ ಪರಿಹಾರ ಸಿಗಲಿದೆ. ಕಾನೂನು ಚೌಕಟ್ಟಿನೊಳಗೆ ಕೆಲಸ ಮಾಡಿ ಇತ್ಯರ್ಥ ಪಡಿಸಬೇಕಾಗುತ್ತದೆ ಎಂದರು.</p>.<p>ಜನರಿಂದ ಸಲ್ಲಿಕೆಯಾಗುವ ಅರ್ಜಿಗಳನ್ನು ಸಾಫ್ಟ್ವೇರ್ಗೆ ನೋಂದಾಯಿಸಲಾಗುವುದು. ಜನರಿಂದ ಸಲ್ಲಿಕೆಯಾದ ಅರ್ಜಿಗಳಲ್ಲಿ ಶೇ 90ರಷ್ಟು ಅರ್ಜಿಗಳನ್ನು 30 ದಿನದಲ್ಲಿ ವಿಲೇವಾರಿ ಮಾಡಲಾಗುವುದು. ಕೆಲ ಅರ್ಜಿಗಳ ವಿಲೇವಾರಿ ತಡವಾಗಬಹುದು. ಅರ್ಜಿಗಳಿಗೆ ತಾರ್ಕಿಕ ಅಂತ್ಯ ನೀಡಲಾಗುವುದು ಎಂದರು.</p>.<p>ಹಾಸನ ಬಿಟ್ಟರೆ ಅತ್ಯಂತ ಹೆಚ್ಚು ಅರ್ಜಿಗಳು ಚನ್ನರಾಯಪಟ್ಟಣದಲ್ಲಿ ಸಲ್ಲಿಕೆಯಾಗಿವೆ ಎಂದ ಅವರು, ಜಿಲ್ಲೆಯಲ್ಲಿ ಜಮೀನಿಗೆ ಸಂಬಂಧಿಸಿದಂತೆ 12 ಸಾವಿರ ಪೋಡಿ ದುರಸ್ತಿ ಮಾಡಲಾಗಿದೆ. ಈ ಹಿಂದಿನ 5 ವರ್ಷದಲ್ಲಿ ಕೇವಲ 500 ಪೋಡಿ ದುರಸ್ತಿ ಮಾಡಲಾಗಿತ್ತು. ಮುಂಬರುವ ದಿನಗಳಲ್ಲಿ 25 ಸಾವಿರ ದುರಸ್ತಿ ಮಾಡಲಾಗುವುದು ಎಂದು ತಿಳಿಸಿದರು.</p>.<p>ಶಾಸಕ ಸಿ.ಎನ್. ಬಾಲಕೃಷ್ಣ, ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ತಹಶೀಲ್ದಾರ್ ಕೆ.ಎಸ್. ಶಂಕರಪ್ಪ, ಅರಣ್ಯಾಧಿಕಾರಿ ಸೌರಭ್ಕುಮಾರ್, ಜಿಲ್ಲಾ ಕೆಡಿಪಿ ಸದಸ್ಯ ಎಂ.ಎ. ಗೋಪಾಲಸ್ವಾಮಿ ಭಾಗವಹಿಸಿದ್ದರು.</p>.<div><blockquote>ನಕಾಶೆಯಲ್ಲಿ ರಸ್ತೆ ಇದ್ದರೆ ಮುಲಾಜಿಲ್ಲದೆ ತೆರವುಗೊಳಿಸಿ. ವಸತಿ ಪ್ರದೇಶಗಳಿಗೆ ಕುರಿತಂತೆ ದಾಖಲೆ ಇರುವುದು ಮತ್ತು ಇಲ್ಲದಿರುವ ಬಗ್ಗೆ ತಹಶೀಲ್ದಾರ್ ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲಿಸಬೇಕು </blockquote><span class="attribution">ಕೃಷ್ಣ ಬೈರೇಗೌಡ ಜಿಲ್ಲಾ ಉಸ್ತುವಾರಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>