‘ಈ ಕಟ್ಟಡ ಲೋಕೋಪಯೋಗಿ ಇಲಾಖೆ ಅಧೀನದಲ್ಲಿದೆ. ಹೀಗಿದ್ದರೂ ರಾಜಕೀಯ ವ್ಯಕ್ತಿಗಳ ಕಾರ್ಯಚಟುವಟಿಕೆ ನಡೆಯಲು ಹೇಗೆ ಅವಕಾಶ ಕಲ್ಪಿಸಲಾಯಿತು ಎಂದು ಇಲಾಖೆ ಅಧಿಕಾರಿಗಳಿಂದ ಕಾರಣ ಕೇಳಲಾಗಿದೆ. ವಿವರಣೆ ನೀಡಲು ಏ. 2ರ ಬೆಳಿಗ್ಗೆ 11 ಗಂಟೆ ವರೆಗೆ ಕಾಲಾವಕಾಶ ನೀಡಲಾಗಿದೆ. ನಂತರ ಆಯೋಗದ ನೀತಿ ಸಂಹಿತೆ ಅನ್ವಯ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.