<p>ಜಾವಗಲ್: ಇಲ್ಲಿನ ದೇವಾಂಗ ಸಂಘ ಹಾಗೂ ಗ್ರಾಮಸ್ಥರ ವತಿಯಿಂದ ರಾಮ ನವಮಿ ಅಂಗವಾಗಿ ಶನಿವಾರ ಆಯೋಜಿಸಲಾಗಿದ್ದ ಓಕುಳಿ ಉತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ಬನಶಂಕರಿ ದೇವಾಲಯದಲ್ಲಿ ಇರಿಸಲಾಗಿದ್ದ ಪರಿವಾರ ಸಹಿತ ಸೀತಾರಾಮರ ಉತ್ಸವ ಮೂರ್ತಿಗೆ ಅರಿಸಿನ ಹಾಗೂ ಕುಂಕುಮದ ನೀರಿನಿಂದ ಅಭಿಷೇಕ ಮಾಡಿ, ನಂತರ ವಿಶೇಷ ಪೂಜೆ ಸಲ್ಲಿಸುವ ಮೂಲಕ ಬಣ್ಣದ ಓಕುಳಿ ಹಬ್ಬಕ್ಕೆ ಚಾಲನೆ ನೀಡಲಾಯಿತು.</p>.<p>ಓಕಳಿ ಉತ್ಸವದ ಅಂಗವಾಗಿ ಸೀತಾರಾಮರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿ ಮೇಲೆ ಇರಿಸಿ, ಪಲ್ಲಕ್ಕಿಯನ್ನು ಹೆಗಲ ಮೇಲೆ ಹೊತ್ತು ಮಂಗಳವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಉತ್ಸವ ಮೂರ್ತಿಯ ಮೆರವಣಿಗೆ ಉದ್ದಕ್ಕೂ ಮಕ್ಕಳು, ಯುವಕರು, ಹಾಗೂ ಮಹಿಳೆಯರು ಪರಸ್ಪರ ಬಣ್ಣದಾಟದಲ್ಲಿ ಮಿಂದೆದ್ದರು.</p>.<p>ಸಂತೆ ಮೈದಾನದಲ್ಲಿ ದೇವರ ಮೂರ್ತಿಗೆ ವಿವಿಧ ಪ್ರತ್ಯೇಕ ಬಣ್ಣಗಳಿಂದ ಸಿದ್ಧಪಡಿಸಿದ ಜಲದಿಂದ ಅಭಿಷೇಕ ಮಾಡಿದ ಬಳಿಕ ಮಹಾಮಂಗಳಾರತಿ ನೆರವೇರಿಸಿ ಉತ್ಸವ ಮೂರ್ತಿಯನ್ನು ದೇವಾಲಯಕ್ಕೆ ಸೇರಿಸುವ ಮೂಲಕ ರಾಮನವಮಿ ಹಾಗೂ ಓಕಳಿ ಉತ್ಸವಕ್ಕೆ ಸಂಪನ್ನಗೊಂಡಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-36-71995219</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಾವಗಲ್: ಇಲ್ಲಿನ ದೇವಾಂಗ ಸಂಘ ಹಾಗೂ ಗ್ರಾಮಸ್ಥರ ವತಿಯಿಂದ ರಾಮ ನವಮಿ ಅಂಗವಾಗಿ ಶನಿವಾರ ಆಯೋಜಿಸಲಾಗಿದ್ದ ಓಕುಳಿ ಉತ್ಸವ ವಿಜೃಂಭಣೆಯಿಂದ ನಡೆಯಿತು.</p>.<p>ಬನಶಂಕರಿ ದೇವಾಲಯದಲ್ಲಿ ಇರಿಸಲಾಗಿದ್ದ ಪರಿವಾರ ಸಹಿತ ಸೀತಾರಾಮರ ಉತ್ಸವ ಮೂರ್ತಿಗೆ ಅರಿಸಿನ ಹಾಗೂ ಕುಂಕುಮದ ನೀರಿನಿಂದ ಅಭಿಷೇಕ ಮಾಡಿ, ನಂತರ ವಿಶೇಷ ಪೂಜೆ ಸಲ್ಲಿಸುವ ಮೂಲಕ ಬಣ್ಣದ ಓಕುಳಿ ಹಬ್ಬಕ್ಕೆ ಚಾಲನೆ ನೀಡಲಾಯಿತು.</p>.<p>ಓಕಳಿ ಉತ್ಸವದ ಅಂಗವಾಗಿ ಸೀತಾರಾಮರ ಉತ್ಸವ ಮೂರ್ತಿಯನ್ನು ಪಲ್ಲಕ್ಕಿ ಮೇಲೆ ಇರಿಸಿ, ಪಲ್ಲಕ್ಕಿಯನ್ನು ಹೆಗಲ ಮೇಲೆ ಹೊತ್ತು ಮಂಗಳವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಉತ್ಸವ ಮೂರ್ತಿಯ ಮೆರವಣಿಗೆ ಉದ್ದಕ್ಕೂ ಮಕ್ಕಳು, ಯುವಕರು, ಹಾಗೂ ಮಹಿಳೆಯರು ಪರಸ್ಪರ ಬಣ್ಣದಾಟದಲ್ಲಿ ಮಿಂದೆದ್ದರು.</p>.<p>ಸಂತೆ ಮೈದಾನದಲ್ಲಿ ದೇವರ ಮೂರ್ತಿಗೆ ವಿವಿಧ ಪ್ರತ್ಯೇಕ ಬಣ್ಣಗಳಿಂದ ಸಿದ್ಧಪಡಿಸಿದ ಜಲದಿಂದ ಅಭಿಷೇಕ ಮಾಡಿದ ಬಳಿಕ ಮಹಾಮಂಗಳಾರತಿ ನೆರವೇರಿಸಿ ಉತ್ಸವ ಮೂರ್ತಿಯನ್ನು ದೇವಾಲಯಕ್ಕೆ ಸೇರಿಸುವ ಮೂಲಕ ರಾಮನವಮಿ ಹಾಗೂ ಓಕಳಿ ಉತ್ಸವಕ್ಕೆ ಸಂಪನ್ನಗೊಂಡಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-36-71995219</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>