<p><strong>ಜಾವಗಲ್: ‘</strong>ಶಿಕ್ಷಣ ಮತ್ತು ಸಂಸ್ಕಾರ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಅಳವಡಿಸಿಕೊಳ್ಳಬೇಕು’ ಎಂದು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಡಿ.ಪರಮೇಶ್ ತಿಳಿಸಿದರು.</p>.<p>ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶನಿವಾರ ನಡೆದ ಶೈಕ್ಷಣಿಕ ವರ್ಷದ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಶಿಕ್ಷಣ ಎಂದರೆ ಪುಸ್ತಕಗಳ ಅಧ್ಯಯನಕ್ಕೆ ಮಾತ್ರ ಸೀಮಿತವಾಗಿರದೆ ಅದು ಜನಪದ ಕಲೆ, ಸಾಹಿತ್ಯ, ಕಥೆ, ಕಾದಂಬರಿ.. ಹೀಗೆ ಮೊದಲಾದ ಸಾಂಸ್ಕೃತಿಕ ಚಟುವಟಿಕೆಗಳನ್ನು ಒಳಗೊಂಡಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಾಂಶುಪಾಲ ಉಮೇಶ್ ಹೊಸಹಳ್ಳಿ ಮಾತನಾಡಿ, ‘ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಲ್ಲಿ ದೊರೆಯುವ ಅವಕಾಶಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಎಲ್ಲರಿಗಿಂತ ಭಿನ್ನವಾಗಿ ಗುರುತಿಸಿಕೊಳ್ಳಬೇಕು’ ಎಂದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮೋಹನ್ ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಜಗನ್ನಾಥ್, ರಾಜಶೇಖರಪ್ಪ, ಶಿವಶಂಕರ್, ಸತ್ಯನಾರಾಯಣ್, ಶಿವಕುಮಾರ್, ವಿಟಿಎಸ್ ನಾಗರಾಜ್, ಲೋಕೇಶ್, ಕುಸುಮಾ, ಪಾಪಣ್ಣ ಹಾಗೂ ಕಾಲೇಜಿನ ಉಪನ್ಯಾಸಕರಾದ ಮಹೇಶ್, ವಂದನಾ, ಮಂಜುನಾಥ್, ಶಿವರಾಜ್, ಚಿತ್ರಲೇಖಾ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾವಗಲ್: ‘</strong>ಶಿಕ್ಷಣ ಮತ್ತು ಸಂಸ್ಕಾರ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಅಳವಡಿಸಿಕೊಳ್ಳಬೇಕು’ ಎಂದು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ ಡಿ.ಪರಮೇಶ್ ತಿಳಿಸಿದರು.</p>.<p>ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶನಿವಾರ ನಡೆದ ಶೈಕ್ಷಣಿಕ ವರ್ಷದ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಶಿಕ್ಷಣ ಎಂದರೆ ಪುಸ್ತಕಗಳ ಅಧ್ಯಯನಕ್ಕೆ ಮಾತ್ರ ಸೀಮಿತವಾಗಿರದೆ ಅದು ಜನಪದ ಕಲೆ, ಸಾಹಿತ್ಯ, ಕಥೆ, ಕಾದಂಬರಿ.. ಹೀಗೆ ಮೊದಲಾದ ಸಾಂಸ್ಕೃತಿಕ ಚಟುವಟಿಕೆಗಳನ್ನು ಒಳಗೊಂಡಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಾಂಶುಪಾಲ ಉಮೇಶ್ ಹೊಸಹಳ್ಳಿ ಮಾತನಾಡಿ, ‘ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಲ್ಲಿ ದೊರೆಯುವ ಅವಕಾಶಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಎಲ್ಲರಿಗಿಂತ ಭಿನ್ನವಾಗಿ ಗುರುತಿಸಿಕೊಳ್ಳಬೇಕು’ ಎಂದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮೋಹನ್ ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಜಗನ್ನಾಥ್, ರಾಜಶೇಖರಪ್ಪ, ಶಿವಶಂಕರ್, ಸತ್ಯನಾರಾಯಣ್, ಶಿವಕುಮಾರ್, ವಿಟಿಎಸ್ ನಾಗರಾಜ್, ಲೋಕೇಶ್, ಕುಸುಮಾ, ಪಾಪಣ್ಣ ಹಾಗೂ ಕಾಲೇಜಿನ ಉಪನ್ಯಾಸಕರಾದ ಮಹೇಶ್, ವಂದನಾ, ಮಂಜುನಾಥ್, ಶಿವರಾಜ್, ಚಿತ್ರಲೇಖಾ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>