<p>ಜಾವಗಲ್: ಕುರಿಗಳ ಮೈ ತೊಳೆಯಲು ಗ್ರಾಮದ ದೊಡ್ಡ ಕೆರೆಗೆ ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಬುಧವಾರ ಮೃತಪಟ್ಟಿದ್ದಾರೆ.</p>.<p>ಜಾವಗಲ್ ಗ್ರಾಮದ ಜನತಾ ಸೈಟ್ ಬಡಾವಣೆಯ ನಿವಾಸಿ ಬೇಬಿಜಾನ್ ಹಾಗೂ ಮೊಹಮ್ಮದ್ ಮುನೀರ್ ದಂಪತಿಯ ಇಬ್ಬರು ಪುತ್ರರಾದ ಇಮ್ರಾನ್ (15) ಹಾಗೂ ಯಾಸಿನ್(13) ಮೃತಪಟ್ಟ ಬಾಲಕರು.</p>.<p>ಶಾಲೆಗೆ ರಜೆ ಇದ್ದಿದ್ದರಿಂದ ಈ ಇಬ್ಬರು ಬಾಲಕರು ಕುರಿ ಮೇಯಿಸಿಕೊಂಡು ಹಾಗೂ ಕುರಿಗಳ ಮೈತೊಳೆದುಕೊಂಡು ಬರುವುದಾಗಿ ಮನೆಯಲ್ಲಿ ತಿಳಿಸಿ ಬುಧವಾರ ಮಧ್ಯಾಹ್ನ 3:30 ಸಮಯದಲ್ಲಿ ಗ್ರಾಮದ ದೊಡ್ಡ ಕೆರೆಗೆ ಹೋಗಿದ್ದು, ಕುರಿಗಳ ಮೈತೊಳೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಸ್ವಲ್ಪ ದೂರದಲ್ಲಿದ್ದ ಇಬ್ರಾಹಿಂ ಎಂಬುವರು ಬಾಲಕರಿಬ್ಬರ ಮೃತದೇಹಗಳು ಕೆರೆಯಲ್ಲಿದ್ದದ್ದನ್ನು ನೋಡಿ, ಶವಗಳನ್ನು ನೀರಿನಿಂದ ಹೊರ ತಂದಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಜಾವಗಲ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಪುನೀತ್ ಹಾಗೂ ಇನ್ನಿತರ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ, ಸ್ಥಳ ಮಹಜರ ನಡೆಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-36-183988573</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಾವಗಲ್: ಕುರಿಗಳ ಮೈ ತೊಳೆಯಲು ಗ್ರಾಮದ ದೊಡ್ಡ ಕೆರೆಗೆ ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಬುಧವಾರ ಮೃತಪಟ್ಟಿದ್ದಾರೆ.</p>.<p>ಜಾವಗಲ್ ಗ್ರಾಮದ ಜನತಾ ಸೈಟ್ ಬಡಾವಣೆಯ ನಿವಾಸಿ ಬೇಬಿಜಾನ್ ಹಾಗೂ ಮೊಹಮ್ಮದ್ ಮುನೀರ್ ದಂಪತಿಯ ಇಬ್ಬರು ಪುತ್ರರಾದ ಇಮ್ರಾನ್ (15) ಹಾಗೂ ಯಾಸಿನ್(13) ಮೃತಪಟ್ಟ ಬಾಲಕರು.</p>.<p>ಶಾಲೆಗೆ ರಜೆ ಇದ್ದಿದ್ದರಿಂದ ಈ ಇಬ್ಬರು ಬಾಲಕರು ಕುರಿ ಮೇಯಿಸಿಕೊಂಡು ಹಾಗೂ ಕುರಿಗಳ ಮೈತೊಳೆದುಕೊಂಡು ಬರುವುದಾಗಿ ಮನೆಯಲ್ಲಿ ತಿಳಿಸಿ ಬುಧವಾರ ಮಧ್ಯಾಹ್ನ 3:30 ಸಮಯದಲ್ಲಿ ಗ್ರಾಮದ ದೊಡ್ಡ ಕೆರೆಗೆ ಹೋಗಿದ್ದು, ಕುರಿಗಳ ಮೈತೊಳೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಸ್ವಲ್ಪ ದೂರದಲ್ಲಿದ್ದ ಇಬ್ರಾಹಿಂ ಎಂಬುವರು ಬಾಲಕರಿಬ್ಬರ ಮೃತದೇಹಗಳು ಕೆರೆಯಲ್ಲಿದ್ದದ್ದನ್ನು ನೋಡಿ, ಶವಗಳನ್ನು ನೀರಿನಿಂದ ಹೊರ ತಂದಿದ್ದಾರೆ.</p>.<p>ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಜಾವಗಲ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಪುನೀತ್ ಹಾಗೂ ಇನ್ನಿತರ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ, ಸ್ಥಳ ಮಹಜರ ನಡೆಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-36-183988573</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>