‘ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಪಕ್ಷಕ್ಕಾಗಿ ಪ್ರಾಣವನ್ನೂ ಕೊಡಲು ತಯಾರಿದ್ದೇನೆ. ಕೆಲ ವರ್ಷಗಳ ಹಿಂದೆ ಬಸ್ಸಿನಲ್ಲಿ ಹೋಗುತ್ತಿದ್ದಾಗ ರಸ್ತೆಯಲ್ಲಿ ನೀವು (ಸಿ.ಎನ್.ಬಾಲಕೃಷ್ಣ) ನಿಂತಿದ್ದನ್ನು ನೋಡಿ, ನಿಮ್ಮನ್ನು ಭೇಟಿಯಾಗುವ ಆತುರದಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ನೆಗೆದು ರಸ್ತೆಗೆ ಬಿದ್ದಾಗ ಹಲ್ಲುಗಳನ್ನು ಕಳೆದುಕೊಂಡೆ. ಆದ್ದರಿಂದ ತಾವು ದಯಮಾಡಿ ನನಗೆ ಹಲ್ಲು ಕಟ್ಟಿಸಿಕೊಡಬೇಕಾಗಿ ಕೇಳಿಕೊಳ್ಳುತ್ತೇನೆ’ ಎಂದು ಮನವಿ ಪತ್ರದಲ್ಲಿ ವಿನಂತಿ
ಮಾಡಿಕೊಂಡಿದ್ದಾರೆ.