<p><strong>ಹಾಸನ:</strong> ಅಧಿ ದೇವತೆ ಹಾಸನಾಂಬ ಜಾತ್ರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ದೇವಿಯ<br />ಆಭರಣಗಳನ್ನು ಜಿಲ್ಲಾ ಖಜಾನೆಯಿಂದ ಪಲ್ಲಕ್ಕಿ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಕೊಂಡೊಯ್ಯಲಾಯಿತು.</p>.<p>ಜಿಲ್ಲಾಧಿಕಾರಿ ಆರ್.ಗಿರೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಕವಿತ ರಾಜಾರಾಂ ಹಾಗೂ ತಹಶೀಲ್ದಾರ್ ಶಿವಶಂಕರಪ್ಪ ಸಮ್ಮುಖದಲ್ಲಿ<br />ಖಜಾನೆಯಿಂದ ಒಡವೆ ಪೆಟ್ಟಿಗೆಗಳನ್ನು ಹೊರ ತಂದು ಪುಷ್ಪಾಲಂಕೃತ ಅಡ್ಡ ಪಲ್ಲಕ್ಕಿ ಮೇಲೆ ಇಟ್ಟು ಪೂಜೆ ಸಲ್ಲಿಸಲಾಯಿತು. ಸಂಪ್ರದಾಯಂತೆ ಮಡಿವಾಳರು ಪಂಜು ಮತ್ತು ಮುತ್ತೈದೆಯರು ಆರತಿ ಬೆಳಗಿದರು.ಭಕ್ತರು ಹಾಸನಾಂಬೆಗೆ ಜೈಕಾರ ಹಾಕಿದರು.</p>.<p>ಬಿಗಿ ಪೊಲೀಸ್ ಬಂದೋ ಬಸ್ತ್ನಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮಂಗಳ ವಾದ್ಯಗಳ ಸಮೇತ ಮೆರವಣಿಗೆ ಮಾಡುವ ಮೂಲಕ<br />ಆಭರಣವನ್ನು ಹಾಸನಾಂಬೆ ದೇಗುಲಕ್ಕೆ ತರಲಾಯಿತು. ಸಂಪ್ರದಾಯದಂತೆ ಅಶ್ವಯುಜ ಮಾಸದ ಮೊದಲ ಗುರುವಾರವಾದ ನ. 5ರಂದು ಮಧ್ಯಾಹ್ನ12.30ಕ್ಕೆ ಬಾಗಿಲು ತೆರೆಯಲಾಗುತ್ತದೆ.</p>.<p>ಸಪ್ತ ಮಾತೃಕೆಯರಲ್ಲಿ ಒಬ್ಬಳಾದ ಅಧಿದೇವತೆ ಜಾತ್ರಾ ಮಹೋತ್ಸವ ಈ ಬಾರಿ ನ.5 ರಿಂದ 17ರವರೆಗೆ ನಡೆಯುತ್ತಿದ್ದರೂ ಕೋವಿಡ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ.</p>.<p>ಮೊದಲ ದಿನ ಜನಪ್ರತಿನಿಧಿಗಳು, ಗಣ್ಯರಿಗೆ ಮಾತ್ರ ದೇವಸ್ಥಾನದ ಒಳ ಪ್ರವೇಶಕ್ಕೆ ಅವಕಾಶ ಕಲ್ಲಿಸಲಾಗಿದೆ. ಸಾರ್ವನಿಕರ<br />ಅನುಕೂಲಕ್ಕಾಗಿ ನಗರದ ಆಯ್ದ ಎಂಟು ಸ್ಥಳಗಳಲ್ಲಿ ಎಲ್ಇಡಿ ಪರದೆ ಅಳವಡಿಸಿ, ದೇವಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಅಧಿ ದೇವತೆ ಹಾಸನಾಂಬ ಜಾತ್ರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ದೇವಿಯ<br />ಆಭರಣಗಳನ್ನು ಜಿಲ್ಲಾ ಖಜಾನೆಯಿಂದ ಪಲ್ಲಕ್ಕಿ ಮೆರವಣಿಗೆಯಲ್ಲಿ ದೇವಸ್ಥಾನಕ್ಕೆ ಕೊಂಡೊಯ್ಯಲಾಯಿತು.</p>.<p>ಜಿಲ್ಲಾಧಿಕಾರಿ ಆರ್.ಗಿರೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಕವಿತ ರಾಜಾರಾಂ ಹಾಗೂ ತಹಶೀಲ್ದಾರ್ ಶಿವಶಂಕರಪ್ಪ ಸಮ್ಮುಖದಲ್ಲಿ<br />ಖಜಾನೆಯಿಂದ ಒಡವೆ ಪೆಟ್ಟಿಗೆಗಳನ್ನು ಹೊರ ತಂದು ಪುಷ್ಪಾಲಂಕೃತ ಅಡ್ಡ ಪಲ್ಲಕ್ಕಿ ಮೇಲೆ ಇಟ್ಟು ಪೂಜೆ ಸಲ್ಲಿಸಲಾಯಿತು. ಸಂಪ್ರದಾಯಂತೆ ಮಡಿವಾಳರು ಪಂಜು ಮತ್ತು ಮುತ್ತೈದೆಯರು ಆರತಿ ಬೆಳಗಿದರು.ಭಕ್ತರು ಹಾಸನಾಂಬೆಗೆ ಜೈಕಾರ ಹಾಕಿದರು.</p>.<p>ಬಿಗಿ ಪೊಲೀಸ್ ಬಂದೋ ಬಸ್ತ್ನಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮಂಗಳ ವಾದ್ಯಗಳ ಸಮೇತ ಮೆರವಣಿಗೆ ಮಾಡುವ ಮೂಲಕ<br />ಆಭರಣವನ್ನು ಹಾಸನಾಂಬೆ ದೇಗುಲಕ್ಕೆ ತರಲಾಯಿತು. ಸಂಪ್ರದಾಯದಂತೆ ಅಶ್ವಯುಜ ಮಾಸದ ಮೊದಲ ಗುರುವಾರವಾದ ನ. 5ರಂದು ಮಧ್ಯಾಹ್ನ12.30ಕ್ಕೆ ಬಾಗಿಲು ತೆರೆಯಲಾಗುತ್ತದೆ.</p>.<p>ಸಪ್ತ ಮಾತೃಕೆಯರಲ್ಲಿ ಒಬ್ಬಳಾದ ಅಧಿದೇವತೆ ಜಾತ್ರಾ ಮಹೋತ್ಸವ ಈ ಬಾರಿ ನ.5 ರಿಂದ 17ರವರೆಗೆ ನಡೆಯುತ್ತಿದ್ದರೂ ಕೋವಿಡ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇರುವುದಿಲ್ಲ.</p>.<p>ಮೊದಲ ದಿನ ಜನಪ್ರತಿನಿಧಿಗಳು, ಗಣ್ಯರಿಗೆ ಮಾತ್ರ ದೇವಸ್ಥಾನದ ಒಳ ಪ್ರವೇಶಕ್ಕೆ ಅವಕಾಶ ಕಲ್ಲಿಸಲಾಗಿದೆ. ಸಾರ್ವನಿಕರ<br />ಅನುಕೂಲಕ್ಕಾಗಿ ನಗರದ ಆಯ್ದ ಎಂಟು ಸ್ಥಳಗಳಲ್ಲಿ ಎಲ್ಇಡಿ ಪರದೆ ಅಳವಡಿಸಿ, ದೇವಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>