ಲವಣ್ಣಗೌಡ ಎಂಬುವವರ ತೋಟದ ಮನೆಯಲ್ಲಿ ಈ ಪ್ರಕರಣ ನಡೆದಿದೆ. ಇನೊವಾ ಕಾರಿನಲ್ಲಿ ಬಂದ ನಾಲ್ವರು, ಪೊಲೀಸರೆಂದು ನಂಬಿಸಿ ಮನೆ ಪ್ರವೇಶಿಸಿದ್ದಾರೆ. ನಿಮ್ಮ ಮಗ ಬೆಂಗಳೂರಿನಲ್ಲಿ ಕಳ್ಳತನ ಮಾಡಿ ಬಂದಿದ್ದಾನೆ ಎಂದಿದ್ದಾರೆ. ನನ್ನ ಮಗ ಚಾಮರಾಜನಗರದಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಲವಣ್ಣಗೌಡ ಹೇಳಿದ್ದಾರೆ. ಆಗ ಕುಟುಂಬದವರನ್ನು ಹೆದರಿಸಿ ಒಂದೆಡೆ ಕೂರಿಸಿ, ಬೀರುವಿನಲ್ಲಿದ್ದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.