<p>ಪ್ರಜಾವಾಣಿ ವಾರ್ತೆ</p>.<p>ಹಾಸನ: ಜಿಲ್ಲೆಯ ಯುವ ಜನತೆಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಅ.30ರಂದು ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜನೆ ಮಾಡಲಾಗುತ್ತಿದ್ದು, ಅಗತ್ಯ ಸಿದ್ಧತೆಗೆ ಕ್ರಮ ಕೈಗೊಳ್ಳುವಂತೆ ಸಂಸದ ಶ್ರೇಯಸ್ ಪಟೇಲ್, ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಉದ್ಯೋಗ ಮೇಳ ಕುರಿತು ಅಧಿಕಾರಿಗಳೊಂದಿಗೆ ಪೂರ್ವ ಸಿದ್ದತಾ ಸಭೆ ನಡೆಸಿದ ಅವರು, ಯುವ ಜನತೆ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಗ್ರಾಮೀಣ ಮಟ್ಟದಿಂದಲೂ ಪ್ರಚಾರ ನೀಡಬೇಕು ಎಂದರು.</p>.<p>ಉದ್ಯೋಗ ಮೇಳದ ಕುರಿತು ಎಲ್ಲೆಡೆ ಮಾಹಿತಿಗಾಗಿ ಪೋಸ್ಟರ್ಗಳನ್ನು ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಳ್ಳುವಂತೆ ಅರಿವು ಮೂಡಿಸಿ ಎಂದು ತಿಳಿಸಿದರು.</p>.<p>ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ವ್ಯಾಸಂಗ ಮಾಡಿರುವವರಿಗೂ ಉದ್ಯೋಗ ಕಲ್ಪಿಸಲು ಹೆಚ್ಚಿನ ಉದ್ಯೋಗದಾತ ಕಂಪನಿಗಳನ್ನು ಆಹ್ವಾನಿಸಬೇಕು. ತಾಲ್ಲೂಕು ಮಟ್ಟದಲ್ಲಿಯೂ ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು, ಸಭೆ ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲು ಅರಿವು ಮೂಡಿಸುವಂತೆ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಕೃಷಿ ಪ್ರಧಾನವಾದ ಜಿಲ್ಲೆ ಆಗಿರುವುದರಿಂದ ಕೃಷಿಗೆ ಒತ್ತು ನೀಡುವ ಕಂಪನಿಗಳನ್ನು ಉದ್ಯೋಗ ಮೇಳಕ್ಕೆ ಆಹ್ವಾನಿಸಬೇಕು ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಬಿ.ಆರ್. ಪೂರ್ಣಿಮಾ ಮಾತನಾಡಿ, ಗ್ರಾಮ ಪಂಚಾಯಿತಿ ಹಂತದಲ್ಲಿ ಹೆಚ್ಚಿನ ಪ್ರಚಾರ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಹೆಚ್ಚಿನ ಯುವಜನತೆ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಉತ್ತೇಜಿಸಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲಾ ಉದ್ಯೋಗಾಧಿಕಾರಿ ವಿಜಯಲಕ್ಷ್ಮಿ, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಹಾಸನ: ಜಿಲ್ಲೆಯ ಯುವ ಜನತೆಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಅ.30ರಂದು ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜನೆ ಮಾಡಲಾಗುತ್ತಿದ್ದು, ಅಗತ್ಯ ಸಿದ್ಧತೆಗೆ ಕ್ರಮ ಕೈಗೊಳ್ಳುವಂತೆ ಸಂಸದ ಶ್ರೇಯಸ್ ಪಟೇಲ್, ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಉದ್ಯೋಗ ಮೇಳ ಕುರಿತು ಅಧಿಕಾರಿಗಳೊಂದಿಗೆ ಪೂರ್ವ ಸಿದ್ದತಾ ಸಭೆ ನಡೆಸಿದ ಅವರು, ಯುವ ಜನತೆ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಗ್ರಾಮೀಣ ಮಟ್ಟದಿಂದಲೂ ಪ್ರಚಾರ ನೀಡಬೇಕು ಎಂದರು.</p>.<p>ಉದ್ಯೋಗ ಮೇಳದ ಕುರಿತು ಎಲ್ಲೆಡೆ ಮಾಹಿತಿಗಾಗಿ ಪೋಸ್ಟರ್ಗಳನ್ನು ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಳ್ಳುವಂತೆ ಅರಿವು ಮೂಡಿಸಿ ಎಂದು ತಿಳಿಸಿದರು.</p>.<p>ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ವ್ಯಾಸಂಗ ಮಾಡಿರುವವರಿಗೂ ಉದ್ಯೋಗ ಕಲ್ಪಿಸಲು ಹೆಚ್ಚಿನ ಉದ್ಯೋಗದಾತ ಕಂಪನಿಗಳನ್ನು ಆಹ್ವಾನಿಸಬೇಕು. ತಾಲ್ಲೂಕು ಮಟ್ಟದಲ್ಲಿಯೂ ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು, ಸಭೆ ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲು ಅರಿವು ಮೂಡಿಸುವಂತೆ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಕೃಷಿ ಪ್ರಧಾನವಾದ ಜಿಲ್ಲೆ ಆಗಿರುವುದರಿಂದ ಕೃಷಿಗೆ ಒತ್ತು ನೀಡುವ ಕಂಪನಿಗಳನ್ನು ಉದ್ಯೋಗ ಮೇಳಕ್ಕೆ ಆಹ್ವಾನಿಸಬೇಕು ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಬಿ.ಆರ್. ಪೂರ್ಣಿಮಾ ಮಾತನಾಡಿ, ಗ್ರಾಮ ಪಂಚಾಯಿತಿ ಹಂತದಲ್ಲಿ ಹೆಚ್ಚಿನ ಪ್ರಚಾರ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಹೆಚ್ಚಿನ ಯುವಜನತೆ ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಉತ್ತೇಜಿಸಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲಾ ಉದ್ಯೋಗಾಧಿಕಾರಿ ವಿಜಯಲಕ್ಷ್ಮಿ, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>