<p>ಅರಸೀಕೆರೆ: ತಾಲ್ಲೂಕಿನ ದಾಸೀಹಳ್ಳಿ ರಾಜರಾಜೇಶ್ವರಿ ಹುತ್ತದಮ್ಮ ದೇವಿಯವರ ನೂತನ ದೇವಾಲಯದ ವಿಮಾನ ಗೋಪುರ ಕಳಶಾರೋಹಣ ಕಾರ್ಯಕ್ರಮ ಶುಕ್ರವಾರ ಸಹಸ್ರಾರು ಭಕ್ತರು ಹಾಗೂ ಹತ್ತಾರು ದೇವರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.</p>.<p>ಮುಂಜಾನೆ ಬ್ರಾಹ್ಮಿ ಲಗ್ನದಿಂದಲೇ ಗಂಗಾಪೂಜೆ ಹಾಗೂ ಗೋಪೂಜೆಯಿಂದ ಪೂಜಾ ವಿಧಾನಗಳು ಆರಂಭವಾದವು. ವಿಶೇಷ ಪುರೋಹಿತ ತಂಡದೊಂದಿಗೆ ದೇವಿಯವರಿಗೆ ಅಭಿಷೇಕ ದೇವಾಲಯದ ಆವರಣದಲ್ಲಿ ನವದುರ್ಗ ಸಮೇತ ಚಂಡಿಕಾ ಹೋಮ, ಪ್ರತ್ಯಂಗಿರಿ ಹೋಮ, ಮಹಾ ಪೂರ್ಣಾಹುತಿ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನಡೆಯಿತು.</p>.<p>ದಾಸೀಹಳ್ಳಿ ಗ್ರಾಮದ ರಾಜ ಬೀದಿಗಳಲ್ಲಿ 108 ಕುಂಭಗಳ ಸಮೇತ ಮೆರವಣಿಗೆ ನಂತರ ವೃಶ್ಚಿಕ ಲಗ್ನದಲ್ಲಿ ಕಳಶಾರೋಹಣ ನಡೆದು ಬಲಿ ಪ್ರಧಾನ ದೃಷ್ಟಿ ಪೂಜೆ ಕಾರ್ಯಕ್ರಮವು ಶಾಸ್ತ್ರೋಕ್ತವಾಗಿ ನೆರವೇರಿತು.</p>.<p>ಅಮ್ಮನಹಟ್ಟಿ ಗಂಗಾಮಾಳಿಕಾ ದೇವಿ, ಯಾದಾಪುರದ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಸೇರಿದಂತೆ ಸುತ್ತಮುತ್ತಲಿನ ದೇವತೆಗಳ ಮೂರ್ತಿಗಳು ಆಗಮಿಸಿದ್ದವು. ನಂತರ ದೇವಿಯವರಿಗೆ ಕುಂಕುಮಾರ್ಚನೆ ಹಾಗೂ ಪುಷ್ಪಾರ್ಚನೆ ನಡೆದು ಮಹಾಮಂಗಳಾರತಿ ಸಲ್ಲಿಸಿ ತೀರ್ಥ ಪ್ರಸಾದ ವಿನಿಯೋಗವು ನಡೆಯಿತು. ಆಗಮಿಸಿದ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.</p>.<p>ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ , ಜೆಡಿಎಸ್ ಮುಖಂಡ ಎನ್ .ಆರ್.ಸಂತೋಷ್ ಸೇರಿದಂತೆ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು, ದಾಸೀಹಳ್ಳಿ ರಾಜರಾಜೇಶ್ವರಿ ಹುತ್ತದಮ್ಮ ದೇವಿಯವರ ಸಮಿತಿಯವರು, ಸುತ್ತಮುತ್ತಲಿನ ಗ್ರಾಮಸ್ಥರು ದೇವರ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಸೀಕೆರೆ: ತಾಲ್ಲೂಕಿನ ದಾಸೀಹಳ್ಳಿ ರಾಜರಾಜೇಶ್ವರಿ ಹುತ್ತದಮ್ಮ ದೇವಿಯವರ ನೂತನ ದೇವಾಲಯದ ವಿಮಾನ ಗೋಪುರ ಕಳಶಾರೋಹಣ ಕಾರ್ಯಕ್ರಮ ಶುಕ್ರವಾರ ಸಹಸ್ರಾರು ಭಕ್ತರು ಹಾಗೂ ಹತ್ತಾರು ದೇವರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.</p>.<p>ಮುಂಜಾನೆ ಬ್ರಾಹ್ಮಿ ಲಗ್ನದಿಂದಲೇ ಗಂಗಾಪೂಜೆ ಹಾಗೂ ಗೋಪೂಜೆಯಿಂದ ಪೂಜಾ ವಿಧಾನಗಳು ಆರಂಭವಾದವು. ವಿಶೇಷ ಪುರೋಹಿತ ತಂಡದೊಂದಿಗೆ ದೇವಿಯವರಿಗೆ ಅಭಿಷೇಕ ದೇವಾಲಯದ ಆವರಣದಲ್ಲಿ ನವದುರ್ಗ ಸಮೇತ ಚಂಡಿಕಾ ಹೋಮ, ಪ್ರತ್ಯಂಗಿರಿ ಹೋಮ, ಮಹಾ ಪೂರ್ಣಾಹುತಿ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ನಡೆಯಿತು.</p>.<p>ದಾಸೀಹಳ್ಳಿ ಗ್ರಾಮದ ರಾಜ ಬೀದಿಗಳಲ್ಲಿ 108 ಕುಂಭಗಳ ಸಮೇತ ಮೆರವಣಿಗೆ ನಂತರ ವೃಶ್ಚಿಕ ಲಗ್ನದಲ್ಲಿ ಕಳಶಾರೋಹಣ ನಡೆದು ಬಲಿ ಪ್ರಧಾನ ದೃಷ್ಟಿ ಪೂಜೆ ಕಾರ್ಯಕ್ರಮವು ಶಾಸ್ತ್ರೋಕ್ತವಾಗಿ ನೆರವೇರಿತು.</p>.<p>ಅಮ್ಮನಹಟ್ಟಿ ಗಂಗಾಮಾಳಿಕಾ ದೇವಿ, ಯಾದಾಪುರದ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಸೇರಿದಂತೆ ಸುತ್ತಮುತ್ತಲಿನ ದೇವತೆಗಳ ಮೂರ್ತಿಗಳು ಆಗಮಿಸಿದ್ದವು. ನಂತರ ದೇವಿಯವರಿಗೆ ಕುಂಕುಮಾರ್ಚನೆ ಹಾಗೂ ಪುಷ್ಪಾರ್ಚನೆ ನಡೆದು ಮಹಾಮಂಗಳಾರತಿ ಸಲ್ಲಿಸಿ ತೀರ್ಥ ಪ್ರಸಾದ ವಿನಿಯೋಗವು ನಡೆಯಿತು. ಆಗಮಿಸಿದ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.</p>.<p>ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ , ಜೆಡಿಎಸ್ ಮುಖಂಡ ಎನ್ .ಆರ್.ಸಂತೋಷ್ ಸೇರಿದಂತೆ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು, ದಾಸೀಹಳ್ಳಿ ರಾಜರಾಜೇಶ್ವರಿ ಹುತ್ತದಮ್ಮ ದೇವಿಯವರ ಸಮಿತಿಯವರು, ಸುತ್ತಮುತ್ತಲಿನ ಗ್ರಾಮಸ್ಥರು ದೇವರ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>