<p><strong>ಹೆತ್ತೂರು</strong>: ಕಲಿಕಾ ಹಬ್ಬವು ಮಕ್ಕಳನ್ನು ಕಲಿಕೆಯ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸುವ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಶೋಭಾ ಹೇಳಿದರು.</p>.<p>ಯಡಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಹೆತ್ತೂರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಥಳೀಯ ಕಲೆಗಳು, ಜನಪದ ಹಾಡುಗಳು ಮತ್ತು ಕಥೆಗಳಿಗೆ ಈ ಹಬ್ಬದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತದೆ ಎಂದರು.</p>.<p>ಇದು ಮಕ್ಕಳಿಗೆ ತಮ್ಮ ಸಂಸ್ಕೃತಿಯ ಪರಿಚಯ, ಚಿತ್ರಕಲೆ, ಮಣ್ಣಿನ ಮಾದರಿ ತಯಾರಿಕೆ, ಕಾಗದದ ಕೆಲಸ, ನಾಟಕಗಳ ಮೂಲಕ ಮಕ್ಕಳ ಸೃಜನಶೀಲ ಶಕ್ತಿಯನ್ನು ಉತ್ತೇಜಿಸಲಾಗುತ್ತದೆ ಎಂದರು.</p>.<p>ಮುಖ್ಯ ಶಿಕ್ಷಕಿ ಆಶಾ ರಾಣಿ ಮಾತನಾಡಿ, ಕಲಿಕಾ ಹಬ್ಬವು ಮಕ್ಕಳಲ್ಲಿ ಕಲಿಯುವ ಆಸಕ್ತಿ ಹೆಚ್ಚಿಸಲು ಮತ್ತು ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಆಯೋಜಿಸಲಾಗುವ ಒಂದು ವಿಶೇಷ ಕಾರ್ಯಕ್ರಮ ಎಂದು ತಿಳಿಸಿದರು.</p>.<p>ಸಮೂಹ ಸಂಪನ್ಮೂಲ ವ್ಯಕ್ತಿ ಪ್ರವೀಣ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಮೋಹನ್, ಸದಸ್ಯರು, ಹೆತ್ತೂರು ಕ್ಲಸ್ಟರ್ ಮಟ್ಟದ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು,ಅಂಗನವಾಡಿ ಸಿಬ್ಬಂದಿ, ಪೋಷಕರು, ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆತ್ತೂರು</strong>: ಕಲಿಕಾ ಹಬ್ಬವು ಮಕ್ಕಳನ್ನು ಕಲಿಕೆಯ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸುವ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಶೋಭಾ ಹೇಳಿದರು.</p>.<p>ಯಡಕೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಹೆತ್ತೂರು ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಥಳೀಯ ಕಲೆಗಳು, ಜನಪದ ಹಾಡುಗಳು ಮತ್ತು ಕಥೆಗಳಿಗೆ ಈ ಹಬ್ಬದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತದೆ ಎಂದರು.</p>.<p>ಇದು ಮಕ್ಕಳಿಗೆ ತಮ್ಮ ಸಂಸ್ಕೃತಿಯ ಪರಿಚಯ, ಚಿತ್ರಕಲೆ, ಮಣ್ಣಿನ ಮಾದರಿ ತಯಾರಿಕೆ, ಕಾಗದದ ಕೆಲಸ, ನಾಟಕಗಳ ಮೂಲಕ ಮಕ್ಕಳ ಸೃಜನಶೀಲ ಶಕ್ತಿಯನ್ನು ಉತ್ತೇಜಿಸಲಾಗುತ್ತದೆ ಎಂದರು.</p>.<p>ಮುಖ್ಯ ಶಿಕ್ಷಕಿ ಆಶಾ ರಾಣಿ ಮಾತನಾಡಿ, ಕಲಿಕಾ ಹಬ್ಬವು ಮಕ್ಕಳಲ್ಲಿ ಕಲಿಯುವ ಆಸಕ್ತಿ ಹೆಚ್ಚಿಸಲು ಮತ್ತು ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಆಯೋಜಿಸಲಾಗುವ ಒಂದು ವಿಶೇಷ ಕಾರ್ಯಕ್ರಮ ಎಂದು ತಿಳಿಸಿದರು.</p>.<p>ಸಮೂಹ ಸಂಪನ್ಮೂಲ ವ್ಯಕ್ತಿ ಪ್ರವೀಣ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ಮೋಹನ್, ಸದಸ್ಯರು, ಹೆತ್ತೂರು ಕ್ಲಸ್ಟರ್ ಮಟ್ಟದ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು,ಅಂಗನವಾಡಿ ಸಿಬ್ಬಂದಿ, ಪೋಷಕರು, ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>