ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ವಿಜಯ ಪ್ರಕಾಶ್ , ಉಪವಿಭಾಗಾಧಿಕಾರಿ ಎಚ್.ಎಲ್.ನಾಗರಾಜ್, ವಿವಿಧ ಇಲಾಖೆ ಅಧಿಕಾರಿಗಳು, ಹಲವು ಸಂಘ ಸಂಸ್ಥೆಗಳ ಸದಸ್ಯರು, ವಿದ್ಯಾರ್ಥಿಗಳು ಕಾಲ್ನಡಿಗೆ ಹಾಗೂ ಸೈಕಲ್ ನಲ್ಲಿ ಮೆರವಣಿಗೆ ನಡೆಸಿ ಗಮನ ಸೆಳೆದರು.
ಜಾಗತಿಕ ತಾಪಮಾನ ಏರಿಕೆ ಸಂಬಂಧ ಜಾಗೃತಿ ಮೂಡಿಸಲು ಆಯೋಜಿಸಿದ್ದ ಜಾಥಾದಲ್ಲಿ ನೂರಾರು ಮಂದಿ ಕಾಲ್ನಡಿಗೆ ಮತ್ತು ಸೈಕಲ್ ಜಾಥಾದಲ್ಲಿ ಭಾಗವಹಿಸಿ ಅರಿವು ಮೂಡಿಸಿದರು.
ಹಲವು ಕಾರಣಗಳಿಂದಾಗಿ ದಿನದಿಂದ ದಿನಕ್ಕೆ ಜಾಗತಿಕ ತಾಪಮಾನ ಏರಿಕೆಯಾಗುವ ಮೂಲಕ ನಾನಾ ರೀತಿಯ ದುಷ್ಪರಿಣಾಮಗಳಾಗುತ್ತಿವೆ. ಮುಖ್ಯವಾಗಿ ನಮ್ಮ ಭೂಮಿ, ನಮ್ಮ ಪರಿಸರ ಮಾಲಿನ್ಯವಾಗುತ್ತಿದ್ದು, ಜೀವ ಸಂಕುಲದ ಮೇಲೆ ದುಷ್ಪರಿಣಾಮವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭೂ ದಿನಾಚರಣೆ, ಸಾಂಕೇತಿಕ ಆಚರಣೆಯಾಗದೆ, ಗಂಭೀರವಾದ ಸಂದೇಶ ಕೊಡುವಂತಾಗಬೇಕು ಎಂದು ವಿಜಯ ಪ್ರಕಾಶ್ ಹೇಳಿದರು.