‘ಲೋಕೋಪಯೋಗಿಯಲ್ಲಿ ‘ಅಲ್ಪಾವಧಿ ಟೆಂಡರ್’ ಸುಗ್ಗಿ ಕುರಿತ ‘ಪ್ರಜಾವಾಣಿ’ ವರದಿಗೆ ಪ್ರತಿಕ್ರಿಯಿಸಿದ ಅವರು, ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿನ ಪಾರದರ್ಶಕ ಕಾಯ್ದೆ –2000ರ (ಕೆಟಿಪಿಪಿ ಕಾಯ್ದೆ) ನಿಯಮಾವಳಿಗಳನ್ನು ಉಲ್ಲಂಘಿಸಿಲ್ಲ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ವಿಭಾಗದಲ್ಲಿ ತುರ್ತು ರಸ್ತೆ ನಿರ್ವಹಣೆ ಕಾಮಗಾರಿಗೆ ₹ 2.78 ಕೋಟಿ ಹಾಗೂ ಲೋಕೋಪಯೋಗಿ ವಿಭಾಗದಲ್ಲಿ ₹ 12 .52 ಕೋಟಿಗೆ ಟೆಂಡರ್ಗಳನ್ನು ಕರೆಯಲಾಗಿದ್ದು, ವಿಶ್ವದ ಯಾವುದೇ ಭಾಗದಿಂದ ಟೆಂಡರ್ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ’ ಎಂದು ಸ್ಪಷ್ಟಪಡಿಸಿದರು.