ಅಭಿನಂದನೆ ಸ್ವೀಕರಿಸಿದ ಶಾಸಕ ಸಿಮೆಂಟ್ ಮಂಜು ಮಾತನಾಡಿ, ‘ಈ ತಾಲ್ಲೂಕಿನಲ್ಲಿ ಒಬ್ಬ ಜನಪ್ರತಿನಿಧಿ ಮಾಡುವುದಕ್ಕಿಂತ ಹೆಚ್ಚು ಸೇವೆಯನ್ನು ಇಲ್ಲಿಯ ರೋಟರಿ ಸಂಸ್ಥೆ ಮಾಡುತ್ತಿದೆ. ಟೋಲ್ಗೇಟ್ನಲ್ಲಿ ಬಸ್ ನಿಲ್ದಾಣ, ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆ ಬಳಿ ಶುದ್ಧ ಕುಡಿಯುವ ನೀರಿನ ಘಟಕ, ಹೇಮಾವತಿ ಸೇತುವೆ ಬಳಿ ಜಿಲ್ಲೆಯ ಜೀವ ನದಿ ಹೇಮಾವತಿ ಪ್ರತಿಮೆ ನಿರ್ಮಾಣ ಸೇರಿ ಸಾಕಷ್ಟು ಜನೋಪಯೋಗಿ ಕೆಲಸಗಳನ್ನು ರೋಟರಿ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ’ ಎಂದರು.