<p><strong>ನುಗ್ಗೇಹಳ್ಳಿ</strong>: ಕರ್ನಾಟಕದಲ್ಲಿ ಕನ್ನಡ ನಾಡು ನುಡಿ ಭಾಷೆ ಉಳಿಯಲು ಆಟೊ ಚಾಲಕರ ಕನ್ನಡ ಅಭಿಮಾನವೂ ಕಾರಣ ಎಂದು ನುಗ್ಗೇಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಭರತ್ ರೆಡ್ಡಿ ಹೇಳಿದರು.</p>.<p>ಹೋಬಳಿ ಕೇಂದ್ರದ ಶ್ರೀ ನುಗ್ಗೇಳ್ಳಮ್ಮ ಗ್ರಾಮ ದೇವತೆ ಆಟೊ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ 4ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.</p>.<p>‘ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು ಇತ್ತೀಚಿನ ವರ್ಷಗಳಲ್ಲಿ ಬೇರೆ ರಾಜ್ಯಗಳ ಅನ್ಯಭಾಷೆಕಾರ ವಲಸೆಯಿಂದ ಕನ್ನಡ ಭಾಷೆಗೆ ತೊಡಕ್ಕಾಗುತ್ತಿದೆ’ ಎಂದರು.</p>.<p>ಸಮುದಾಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರವೀಣ್ ಮಾತನಾಡಿ ಕನ್ನಡ ನಾಡು ನುಡಿ ಭಾಷೆಯ ಮೇಲಿರುವ ಆಟೊ ಚಾಲಕರ ಭಾಷಾಭಿಮಾನವನ್ನು ನಾವೆಲ್ಲರೂ ಗೌರವಿಸಬೇಕಾಗಿದೆ ಎಂದರು.</p>.<p>ನಾಲ್ಕನೇ ವರ್ಷದ ಕನ್ನಡ ರಾಜ್ಯೋತ್ಸವ ಅಂಗವಾಗಿ ಗ್ರಾಮದ ಮುಖ್ಯ ರಸ್ತೆಗಳಲ್ಲಿ ಕನ್ನಡ ಬಾವುಟದೊಂದಿಗೆ ಸಿಂಗಾರಗೊಂಡಿದ್ದ ಆಟೊ ಮೆರವಣಿಗೆ ಚಾಲಕರಿಂದ ನಡೆಯಿತು. ಜೊತೆಗೆ ಸಂಘದ ವತಿಯಿಂದ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಯಿತು.</p>.<p>ಸಂಘದ ಪದಾಧಿಕಾರಿಗಳಾದ ಲೋಕೇಶ್, ಆದಿಲ್ ಪಾಶ, ಕೆಂಪರಾಜ್, ರಘುನಾಥ್, ಜಬಿ, ಶಿವಕುಮಾರ್, ಸ್ವಾಮಿ, ರಫೀಕ್, ಶಬರಿ,ಸತೀಶ್ ಗೌಡ, ಮನೋಜ್, ಶ್ರೀನಿವಾಸ್, ತೇಜಸ್, ರಫೀಕ್ ಇಸ್ಮೈಲ್, ಶೋಯಬ್ ಪಾಷಾ, ಆನಂದ, ಕೃಷ್ಣಮೂರ್ತಿ, ಪುನೀತ್, ಧರಣೀಶ , ಅಭಿಲಾಶ್ ಮಹೇಶ್, ಜಾವೇದ್ ಪಾಷ, ಜಯರಾಮ, ನಾಗೇಶ್, ಬಸವರಾಜ್, ಇಂಚರ, ಸೃಜನ್, ರೋಹಿತ್, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನುಗ್ಗೇಹಳ್ಳಿ</strong>: ಕರ್ನಾಟಕದಲ್ಲಿ ಕನ್ನಡ ನಾಡು ನುಡಿ ಭಾಷೆ ಉಳಿಯಲು ಆಟೊ ಚಾಲಕರ ಕನ್ನಡ ಅಭಿಮಾನವೂ ಕಾರಣ ಎಂದು ನುಗ್ಗೇಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಭರತ್ ರೆಡ್ಡಿ ಹೇಳಿದರು.</p>.<p>ಹೋಬಳಿ ಕೇಂದ್ರದ ಶ್ರೀ ನುಗ್ಗೇಳ್ಳಮ್ಮ ಗ್ರಾಮ ದೇವತೆ ಆಟೊ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ 4ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.</p>.<p>‘ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು ಇತ್ತೀಚಿನ ವರ್ಷಗಳಲ್ಲಿ ಬೇರೆ ರಾಜ್ಯಗಳ ಅನ್ಯಭಾಷೆಕಾರ ವಲಸೆಯಿಂದ ಕನ್ನಡ ಭಾಷೆಗೆ ತೊಡಕ್ಕಾಗುತ್ತಿದೆ’ ಎಂದರು.</p>.<p>ಸಮುದಾಯ ಕೇಂದ್ರದ ವೈದ್ಯಾಧಿಕಾರಿ ಡಾ.ಪ್ರವೀಣ್ ಮಾತನಾಡಿ ಕನ್ನಡ ನಾಡು ನುಡಿ ಭಾಷೆಯ ಮೇಲಿರುವ ಆಟೊ ಚಾಲಕರ ಭಾಷಾಭಿಮಾನವನ್ನು ನಾವೆಲ್ಲರೂ ಗೌರವಿಸಬೇಕಾಗಿದೆ ಎಂದರು.</p>.<p>ನಾಲ್ಕನೇ ವರ್ಷದ ಕನ್ನಡ ರಾಜ್ಯೋತ್ಸವ ಅಂಗವಾಗಿ ಗ್ರಾಮದ ಮುಖ್ಯ ರಸ್ತೆಗಳಲ್ಲಿ ಕನ್ನಡ ಬಾವುಟದೊಂದಿಗೆ ಸಿಂಗಾರಗೊಂಡಿದ್ದ ಆಟೊ ಮೆರವಣಿಗೆ ಚಾಲಕರಿಂದ ನಡೆಯಿತು. ಜೊತೆಗೆ ಸಂಘದ ವತಿಯಿಂದ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಯಿತು.</p>.<p>ಸಂಘದ ಪದಾಧಿಕಾರಿಗಳಾದ ಲೋಕೇಶ್, ಆದಿಲ್ ಪಾಶ, ಕೆಂಪರಾಜ್, ರಘುನಾಥ್, ಜಬಿ, ಶಿವಕುಮಾರ್, ಸ್ವಾಮಿ, ರಫೀಕ್, ಶಬರಿ,ಸತೀಶ್ ಗೌಡ, ಮನೋಜ್, ಶ್ರೀನಿವಾಸ್, ತೇಜಸ್, ರಫೀಕ್ ಇಸ್ಮೈಲ್, ಶೋಯಬ್ ಪಾಷಾ, ಆನಂದ, ಕೃಷ್ಣಮೂರ್ತಿ, ಪುನೀತ್, ಧರಣೀಶ , ಅಭಿಲಾಶ್ ಮಹೇಶ್, ಜಾವೇದ್ ಪಾಷ, ಜಯರಾಮ, ನಾಗೇಶ್, ಬಸವರಾಜ್, ಇಂಚರ, ಸೃಜನ್, ರೋಹಿತ್, ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>