ಹಾಸನ : ಅರಸೀಕೆರೆ ತಾಲ್ಲೂಕು ಕರಗುಂದ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ ಖಾತರಿ ಯೋಜನೆ ಕೂಲಿ ಹಣ ಪಾವತಿಸದೆ ಕರ್ತವ್ಯ ಲೋಪ ಎಸಗಿರುವ ಆರೋಪದ ಮೇರೆಗೆ ಪ್ರಭಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಜಾಕೀರ್ ಹುಸೇನ್ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.
ಅಲ್ಲದೇ ಕರ್ತವ್ಯ ಲೋಪವೆಸಗಿರುವುದು ಪರಿಶೀಲನಾ ವರದಿಯಿಂದ ಸಾಬೀತಾಗಿರುವ ಹಿನ್ನೆಲೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ ತಾಲ್ಲೂಕು ಪಂಚಾಯಿತಿ ತಾಂತ್ರಿಕ ಸಹಾಯಕರಾದ ಜೆ.ಎಚ್ .ರಾಜೇಶ್, ಸತೀಶ್ ಕುಮಾರ್, ಕೃಷ್ಣ, ಅನಿಲ್ಕುಮಾರ್ ಮತ್ತು ಕರಗುಂದ ಗ್ರಾಮ ಪಂಚಾಯಿತಿ ಗಣಕಯಂತ್ರ ಸಹಾಯಕಿ ಶೀಲಾ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟಸ್ವಾಮಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.