ಮುಖ್ಯಮಂತ್ರಿ ಆಗಿದ್ದವರು, ಪ್ರಧಾನಿ ಆಗಿದ್ದವರು ಮಾಡದ ವಿಮಾನ ನಿಲ್ದಾಣ ಮಾಡಿದ್ದು ಪ್ರೀತಂ ಗೌಡ. ಹಾಸನ- ಚಿಕ್ಕಮಗಳೂರು ಹೆದ್ದಾರಿ ಚತುಷ್ಪಥವಾಗಲಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಸಿ.ಟಿ. ಹೇಳಿದರು.
ಅಭಿವೃದ್ಧಿ ವಿಷಯದಲ್ಲಿ ನಾವು ಜಾಗ್ವಾರ್ ಥರ ಕೆಲಸ ಮಾಡಿದ್ದೇವೆ. ಡಕೋಟ ಥರ ಅಲ್ಲ ಎಂದರು. ಒಂದು ಪಕ್ಷಕ್ಕೆ ನೀತಿ, ಸಿದ್ಧಾಂತ ಇರಬೇಕು. ದೇಶ ಮೊದಲು ನಮ್ಮ ತತ್ವ. ಅಧಿಕಾರ, ಕುಟುಂಬ ಮೊದಲು ಎಂಬುದಲ್ಲ. ಎಲ್ಲರ ಅಭಿವೃದ್ಧಿ ಎಂದರೆ ತಾತ, ಮುತ್ತಾತರ ಅಭಿವೃದ್ಧಿಯಲ್ಲ, ಬಡವ, ಶೋಷಿತರ ಅಭಿವೃದ್ಧಿ ನಮ್ಮ ನೀತಿ ಎಂದು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಳೆದ ಬಾರಿ ಶಾಸಕನಾಗಿ ಪ್ರೀತಂರನ್ನು ಆಯ್ಕೆ ಮಾಡಿದ್ದೀರಿ. ಈ ಬಾರಿ ಸಚಿವರಾಗಲು ಅವರನ್ನು ಆಯ್ಕೆ ಮಾಡಬೇಕು ಎಂದರು.
ಕಾಂಗ್ರೆಸ್, ಸಮಾಜವಾದಿ ಪಕ್ಷ, ಆರ್ ಜೆಡಿ, ಎನ್ ಸಿಪಿಯಂತೆ ಕುಟುಂಬವೇ ನೇತಾರ ಆಗಿರುವ ಪಕ್ಷಗಳಂತೆ ರಾಜ್ಯದಲ್ಲಿಯೂ ಒಂದು ಪಕ್ಷವಿದೆ ಎಂದು ಜೆಡಿಎಸ್ ಹೆಸರು ಹೇಳದೇ ವಾಗ್ದಾಳಿ ನಡೆಸಿದರು.