ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನದಿಂದ ಸ್ವರೂಪ್‌ಗೆ ಜೆಡಿಎಸ್ ಟಿಕೆಟ್: ಬೆಂಬಲಿಗರ ಸಂಭ್ರಮಾಚರಣೆ

Last Updated 14 ಏಪ್ರಿಲ್ 2023, 14:12 IST
ಅಕ್ಷರ ಗಾತ್ರ

ಹಾಸನ: ಕಡೆಗೂ ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಘೋಷಣೆಯಾಗಿದ್ದು, ಪ್ರಬಲ ಆಕಾಂಕ್ಷಿಯಾಗಿದ್ದ ಸ್ವರೂಪ್‌ಗೆ ಟಿಕೆಟ್ ನೀಡಲಾಗಿದೆ. ಸ್ವರೂಪ್‌ ಮನೆ ಎದುರು ಅಭಿಮಾನಿಗಳ ಸಂಭ್ರಮಾಚರಣೆ ಮಾಡುತ್ತಿದ್ದು, ಸಿಹಿ ಹಂಚಿ ಸಂಭ್ರಮಿಸಿದರು.

ಮೂರು ತಿಂಗಳಿಂದ ಭವಾನಿ ರೇವಣ್ಣ ಮತ್ತು ಸ್ವರೂಪ್ ನಡುವೆ ನಡೆದಿದ್ದ ಹಗ್ಗ ಜಗ್ಗಾಟಕ್ಕೆ ತೆರೆ ಬಿದ್ದಿದ್ದು, ಟಿಕೆಟ್ ಸಿಕ್ಕಿರುವ ಬಗ್ಗೆ ಸ್ವರೂಪ್‌ ಸಂತಸ ವ್ಯಕ್ತಪಡಿಸಿದ್ದಾರೆ.

‘ರೇವಣ್ಣ ಸಾಹೇಬ್ರು, ಭವಾನಿ ಮೇಡಂ ಎಲ್ಲರ ಸಹಕಾರದಿಂದ ಚುನಾವಣೆ ಗೆಲ್ಲುವ ವಿಶ್ವಾಸವಿದೆ. ನಿರೀಕ್ಷೆಯಂತೆಯೇ ಟಿಕೆಟ್ ಸಿಕ್ಕಿದೆ: ಇದರಿಂದ ಸಂತೋಷವಾಗಿದೆ. ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ನೂರಕ್ಕೆ ನೂರರಷ್ಟು ಗೆಲ್ಲಲಿದೆ. ದೇವೇಗೌಡರು, ರೇವಣ್ಣ ಸಾಹೇಬ್ರು, ಕುಮಾರಣ್ಣ ಅವರಿಗೆ ಋಣಿಯಾಗಿರುವೆ’ ಎಂದು ಸ್ವರೂಪ್‌ ಹೇಳಿದರು.

ಸುದ್ದಿಗಾರರ ಜೊತೆಗೆ ಮಾತನಾಡಿದ ಸ್ವರೂಪ್‌ ಅವರ ತಾಯಿ ಲಲಿತಾ ಪ್ರಕಾಶ್‌, ‘ಸ್ವರೂಪ್‌ಗೆ ಟಿಕೆಟ್‌ ನೀಡುವ ಮೂಲಕ ಕುಮಾರಸ್ವಾಮಿ, ರೇವಣ್ಣ ಅವರು ನುಡಿದಂತೆ ನಡೆದಿದ್ದಾರೆ. ತಬ್ಬಲಿ ಮಗನನ್ನು ಕೈಹಿಡಿದಿದ್ದಾರೆ. ಸ್ವರೂಪ್‌ ಕೂಡ ತಮ್ಮ ತಂದೆ ದಿ. ಎಚ್‌.ಎಸ್‌. ಪ್ರಕಾಶ್‌ ಅವರಂತೆ ಉತ್ತಮ ಕೆಲಸ ಮಾಡುತ್ತಾರೆ. ಮಗನನ್ನು ಗೆಲ್ಲಿಸುವಂತೆ ಮತದಾರರಲ್ಲೂ ಮನವಿ ಮಾಡುತ್ತೇನೆ’ ಎಂದು ಹೇಳಿದರು.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT