‘ಹಾಸನ ಕ್ಷೇತ್ರದಲ್ಲಿ ಬಿಜೆಪಿಯನ್ನು ಎದುರಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ಸಾಮಾನ್ಯ ಕಾರ್ಯಕರ್ತರನ್ನು ಕಣಕ್ಕಿಳಿ ಸಿದರೆ ಗೆಲುವು ಸಾಧ್ಯವಿಲ್ಲ. ಮತ್ತೆ ಕ್ಷೇತ್ರ ಕೈತಪ್ಪಿದರೆ, ಕಾರ್ಯಕರ್ತರು ಅನಾಥಪ್ರಜ್ಞೆ ಅನುಭವಿಸಬೇಕಾಗುತ್ತದೆ. ಈ ಬಾರಿ ಏನಾದರೂ ಆಗಲಿ, ಪಕ್ಷ ಗೆಲ್ಲಬೇಕು’ ಎಂದು ಮುಖಂಡರು ಪ್ರತಿಪಾದಿಸಿದ್ದಾರೆ.