ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನದಿಂದ ನನಗೇ ಜೆಡಿಎಸ್‌ ಟಿಕೆಟ್‌: ಸ್ವರೂಪ್‌

Last Updated 24 ಜನವರಿ 2023, 17:52 IST
ಅಕ್ಷರ ಗಾತ್ರ

ಹಾಸನ: ‘ಕ್ಷೇತ್ರದಲ್ಲಿ ಚುನಾವಣೆ ಸಂಬಂಧ ಸಂಚರಿಸುತ್ತಿದ್ದು, ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಪಕ್ಷದ ಗೆಲುವು ಶತಸಿದ್ಧ. ವರಿಷ್ಠರು ನನಗೇ ಟಿಕೆಟ್ ಕೊಡುವರೆಂಬ ಭರವಸೆ ಇದೆ’ ಎಂದು ಟಿಕೆಟ್‌ ಆಕಾಂಕ್ಷಿ ಎಚ್.ಪಿ ಸ್ವರೂಪ್ ಪ್ರತಿಕ್ರಿಯಿಸಿದ್ದಾರೆ.

‘ಭವಾನಿ ಅವರ ಹೇಳಿಕೆ ಕುರಿತು ಸ್ನೇಹಿತರು, ಹಿತೈಷಿಗಳು ಕರೆ ಮಾಡಿ ಕೇಳುತ್ತಿದ್ದಾರೆ. ಟಿಕೆಟ್‌ ಅಂತಿಮವಾಗಿಲ್ಲ ಎಂದೇ ಹೇಳುತ್ತಿದ್ದೇನೆ. ಕಾರ್ಯಕರ್ತರೂ ಗೊಂದಲಕ್ಕೆ ಒಳಗಾಗಬಾರದು’ ಎಂದು ಕೋರಿದ್ದಾರೆ.

‘ಅಭ್ಯರ್ಥಿ ಕುರಿತು ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಜಿಲ್ಲೆಯ ಹಾಲಿ ಶಾಸಕರ ಕ್ಷೇತ್ರಗಳನ್ನು ಹೊರತುಪಡಿಸಿ ಹಾಸನ, ಅರಸೀಕೆರೆ, ಅರಕಲಗೂಡು ಕ್ಷೇತ್ರಗಳ ಟಿಕೆಟ್ ಯಾರಿಗೆ ಎಂಬುದನ್ನು ವರಿಷ್ಠರೇ ನಿರ್ಧರಿಸುತ್ತಾರೆ’ ಎಂದಿದ್ದಾರೆ. ‘ದೇವೇಗೌಡರು ಹಾಗೂ ರೇವಣ್ಣ ಅವರ ಆಶೀರ್ವಾದ ನಮ್ಮ ಕುಟುಂಬದ ಮೇಲಿದೆ. ಆರು ಬಾರಿ ಟಿಕೆಟ್‌ ಪಡೆದಿದ್ದ ನಮ್ಮ ತಂದೆ ಎಚ್‌.ಎಸ್.ಪ್ರಕಾಶ್, ನಾಲ್ಕು ಬಾರಿ ಶಾಸಕರಾಗಿದ್ದರು. ಅವರ ಸಾವಿನ ನಂತರವೂ ರೇವಣ್ಣ ಬೆಂಬಲವಾಗಿ ನಿಂತಿದ್ದು, ಸಕ್ರಿಯವಾಗಿ ರಾಜಕೀಯದಲ್ಲಿ ಮುಂದುವರೆಯುವಂತೆ ಹಲವು ಬಾರಿ ಸಲಹೆ ನೀಡಿದ್ದರು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT