‘ಅಭ್ಯರ್ಥಿ ಕುರಿತು ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಜಿಲ್ಲೆಯ ಹಾಲಿ ಶಾಸಕರ ಕ್ಷೇತ್ರಗಳನ್ನು ಹೊರತುಪಡಿಸಿ ಹಾಸನ, ಅರಸೀಕೆರೆ, ಅರಕಲಗೂಡು ಕ್ಷೇತ್ರಗಳ ಟಿಕೆಟ್ ಯಾರಿಗೆ ಎಂಬುದನ್ನು ವರಿಷ್ಠರೇ ನಿರ್ಧರಿಸುತ್ತಾರೆ’ ಎಂದಿದ್ದಾರೆ. ‘ದೇವೇಗೌಡರು ಹಾಗೂ ರೇವಣ್ಣ ಅವರ ಆಶೀರ್ವಾದ ನಮ್ಮ ಕುಟುಂಬದ ಮೇಲಿದೆ. ಆರು ಬಾರಿ ಟಿಕೆಟ್ ಪಡೆದಿದ್ದ ನಮ್ಮ ತಂದೆ ಎಚ್.ಎಸ್.ಪ್ರಕಾಶ್, ನಾಲ್ಕು ಬಾರಿ ಶಾಸಕರಾಗಿದ್ದರು. ಅವರ ಸಾವಿನ ನಂತರವೂ ರೇವಣ್ಣ ಬೆಂಬಲವಾಗಿ ನಿಂತಿದ್ದು, ಸಕ್ರಿಯವಾಗಿ ರಾಜಕೀಯದಲ್ಲಿ ಮುಂದುವರೆಯುವಂತೆ ಹಲವು ಬಾರಿ ಸಲಹೆ ನೀಡಿದ್ದರು’ ಎಂದಿದ್ದಾರೆ.