<p><strong>ಬಾಗೂರು</strong> (ನುಗ್ಗೇಹಳ್ಳಿ): ‘ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ ಯೋಜನೆಗಳಾಗಿದ್ದು ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಬಲವರ್ಧನೆಗೆ ಪೂರಕವಾಗಿವೆ’ ಎಂದು ಗ್ಯಾರಂಟಿ ಯೋಜನಾ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಪಿ. ಪ್ರಕಾಶ್ ಗೌಡ ಹೇಳಿದರು.</p>.<p>ಕುರು ಹೀನ ಶೆಟ್ಟಿ ಸಮುದಾಯ ಭವನದಲ್ಲಿ ಹೋಬಳಿ ಮಟ್ಟದ 4ನೇ ಗ್ಯಾರಂಟಿ ಕುಂದು ಕೊರತೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇಡೀ ಜಿಲ್ಲೆಯಲ್ಲೇ ತಾಲ್ಲೂಕು ಗ್ಯಾರಂಟಿ ಯೋಜನಾ ಸಮಿತಿ ಗ್ಯಾರಂಟಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಲ್ಲಿ ಮೊದಲನೆ ಸ್ಥಾನ ಪಡೆದಿದೆ. ಈಗಾಗಲೇ ತಾಲ್ಲೂಕಿನ 4 ಹೋಬಳಿ ಕೇಂದ್ರಗಳಲ್ಲಿ ಸಭೆ ನಡೆಸಲಾಗಿದೆ. ಮುಂಬರುವ ದಿನಗಳಲ್ಲಿ ಕಸಬಾ ಹಾಗೂ ದಂಡಿಗನಹಳ್ಳಿ ಹೋಬಳಿ ಕೇಂದ್ರಗಳಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ’ ಎಂದರು.</p>.<p>‘ಮುಂಬರುವ ದಿನಗಳಲ್ಲಿ 5 ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕಾಗಿ ಯೋಜನೆ ವ್ಯಾಪ್ತಿಗೆ ವ್ಯಾಪ್ತಿಗೆ ವಳಪಡುವ ಅಧಿಕಾರಿಗಳು ಮತ್ತು ಫಲಾನುಭವಿಗಳ ತರಬೇತಿ ಕಾರ್ಯಕ್ರಮವನ್ನು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಂತ ಹಂತವಾಗಿ ನಡೆಸಲು ಯೋಜನೆ ರೂಪಿಸಲಾಗಿದೆ’ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಹರೀಶ್ ಮಾತನಾಡಿ, ‘ಸರ್ಕಾರದ ನಿಯಮಾವಳಿ ಪ್ರಕಾರ ತಾಲ್ಲೂಕಿನಲ್ಲಿ 5 ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಶಕ್ತಿಮೀರಿ ಯೋಜನಾ ಸಮಿತಿ ಅಧ್ಯಕ್ಷರು ಸದಸ್ಯರು ಅಧಿಕಾರಿಗಳು ಶ್ರಮವಿಸುವ ಮೂಲಕ ಶೇ 99ರಷ್ಟು ಗುರಿ ಹೊಂದಲಾಗಿದೆ. ಪ್ರತಿ ಮಾಸಿಕ ₹26 ಕೋಟಿಗೂ ಹೆಚ್ಚು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಪ್ರತಿ ತಿಂಗಳು ಬಿಡುಗಡೆ ಮಾಡುತ್ತಿದೆ. ತಾಲ್ಲೂಕಿನಲ್ಲಿ ಕೆಲವು ಸಣ್ಣಪುಟ್ಟ ನ್ಯೂನತೆಗಳಿಂದ ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗಳಲ್ಲಿ ಕೆಲವು ಫಲಾನುಭವಿಗಳಿಗೆ ಅನುದಾನ ದೊರಕುತ್ತಿಲ್ಲ. ಈ ಬಗ್ಗೆ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ’ ಎಂದರು.</p>.<p>ನುಗ್ಗೇಹಳ್ಳಿ - ಬಾಗೂರು ಹೋಬಳಿ ಕೇಂದ್ರಗಳ ಮಾರ್ಗದಲ್ಲಿ ಬಸ್ ಸಂಚಾರ ಆರಂಭಿಸುವಂತೆ ನಿಗಮದ ಅಧಿಕಾರಿಗಳಿಗೆ ಸಭೆಯ ಮೂಲಕ ತಿಳಿಸಲಾಯಿತು.</p>.<p>ಗ್ಯಾರಂಟಿ ಸಮಿತಿ ಸದಸ್ಯರಾದ ಸುರೇಶ್ , ನವೀನ್ ಕುಮಾರ್, ರಂಗಸ್ವಾಮಿ, ವಿಜಿ ಅಶೋಕ್, ಪ್ರಕಾಶ್, ನಿಶ್ಚಲ್, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಗಿರೀಶ್, ನುಗ್ಗೇಹಳ್ಳಿ ಉಪ ವಿಭಾಗದ ಸೆಸ್ಕಾಂ ಸಹಾಯಕ ಎಂಜಿನಿಯರ್ ಎಚ್.ಡಿ. ವಜ್ರ ಕುಮಾರ್, ಪಿಡಿಒ ಎಸ್ ಜೆ ರಮೇಶ್, ದೇವರಾಜ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-36-787956597</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೂರು</strong> (ನುಗ್ಗೇಹಳ್ಳಿ): ‘ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ ಯೋಜನೆಗಳಾಗಿದ್ದು ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಬಲವರ್ಧನೆಗೆ ಪೂರಕವಾಗಿವೆ’ ಎಂದು ಗ್ಯಾರಂಟಿ ಯೋಜನಾ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಪಿ. ಪ್ರಕಾಶ್ ಗೌಡ ಹೇಳಿದರು.</p>.<p>ಕುರು ಹೀನ ಶೆಟ್ಟಿ ಸಮುದಾಯ ಭವನದಲ್ಲಿ ಹೋಬಳಿ ಮಟ್ಟದ 4ನೇ ಗ್ಯಾರಂಟಿ ಕುಂದು ಕೊರತೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇಡೀ ಜಿಲ್ಲೆಯಲ್ಲೇ ತಾಲ್ಲೂಕು ಗ್ಯಾರಂಟಿ ಯೋಜನಾ ಸಮಿತಿ ಗ್ಯಾರಂಟಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಲ್ಲಿ ಮೊದಲನೆ ಸ್ಥಾನ ಪಡೆದಿದೆ. ಈಗಾಗಲೇ ತಾಲ್ಲೂಕಿನ 4 ಹೋಬಳಿ ಕೇಂದ್ರಗಳಲ್ಲಿ ಸಭೆ ನಡೆಸಲಾಗಿದೆ. ಮುಂಬರುವ ದಿನಗಳಲ್ಲಿ ಕಸಬಾ ಹಾಗೂ ದಂಡಿಗನಹಳ್ಳಿ ಹೋಬಳಿ ಕೇಂದ್ರಗಳಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ’ ಎಂದರು.</p>.<p>‘ಮುಂಬರುವ ದಿನಗಳಲ್ಲಿ 5 ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕಾಗಿ ಯೋಜನೆ ವ್ಯಾಪ್ತಿಗೆ ವ್ಯಾಪ್ತಿಗೆ ವಳಪಡುವ ಅಧಿಕಾರಿಗಳು ಮತ್ತು ಫಲಾನುಭವಿಗಳ ತರಬೇತಿ ಕಾರ್ಯಕ್ರಮವನ್ನು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಂತ ಹಂತವಾಗಿ ನಡೆಸಲು ಯೋಜನೆ ರೂಪಿಸಲಾಗಿದೆ’ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಹರೀಶ್ ಮಾತನಾಡಿ, ‘ಸರ್ಕಾರದ ನಿಯಮಾವಳಿ ಪ್ರಕಾರ ತಾಲ್ಲೂಕಿನಲ್ಲಿ 5 ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಶಕ್ತಿಮೀರಿ ಯೋಜನಾ ಸಮಿತಿ ಅಧ್ಯಕ್ಷರು ಸದಸ್ಯರು ಅಧಿಕಾರಿಗಳು ಶ್ರಮವಿಸುವ ಮೂಲಕ ಶೇ 99ರಷ್ಟು ಗುರಿ ಹೊಂದಲಾಗಿದೆ. ಪ್ರತಿ ಮಾಸಿಕ ₹26 ಕೋಟಿಗೂ ಹೆಚ್ಚು ಗ್ಯಾರಂಟಿ ಯೋಜನೆಗಳಿಗೆ ಸರ್ಕಾರ ಪ್ರತಿ ತಿಂಗಳು ಬಿಡುಗಡೆ ಮಾಡುತ್ತಿದೆ. ತಾಲ್ಲೂಕಿನಲ್ಲಿ ಕೆಲವು ಸಣ್ಣಪುಟ್ಟ ನ್ಯೂನತೆಗಳಿಂದ ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗಳಲ್ಲಿ ಕೆಲವು ಫಲಾನುಭವಿಗಳಿಗೆ ಅನುದಾನ ದೊರಕುತ್ತಿಲ್ಲ. ಈ ಬಗ್ಗೆ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ’ ಎಂದರು.</p>.<p>ನುಗ್ಗೇಹಳ್ಳಿ - ಬಾಗೂರು ಹೋಬಳಿ ಕೇಂದ್ರಗಳ ಮಾರ್ಗದಲ್ಲಿ ಬಸ್ ಸಂಚಾರ ಆರಂಭಿಸುವಂತೆ ನಿಗಮದ ಅಧಿಕಾರಿಗಳಿಗೆ ಸಭೆಯ ಮೂಲಕ ತಿಳಿಸಲಾಯಿತು.</p>.<p>ಗ್ಯಾರಂಟಿ ಸಮಿತಿ ಸದಸ್ಯರಾದ ಸುರೇಶ್ , ನವೀನ್ ಕುಮಾರ್, ರಂಗಸ್ವಾಮಿ, ವಿಜಿ ಅಶೋಕ್, ಪ್ರಕಾಶ್, ನಿಶ್ಚಲ್, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಗಿರೀಶ್, ನುಗ್ಗೇಹಳ್ಳಿ ಉಪ ವಿಭಾಗದ ಸೆಸ್ಕಾಂ ಸಹಾಯಕ ಎಂಜಿನಿಯರ್ ಎಚ್.ಡಿ. ವಜ್ರ ಕುಮಾರ್, ಪಿಡಿಒ ಎಸ್ ಜೆ ರಮೇಶ್, ದೇವರಾಜ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-36-787956597</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>