ಆಹಾರ, ಔಷಧಿ, ಕೌಶಲಗಳಲ್ಲಿ ದೇಶ ಸ್ವಾವಲಂಬನೆ ಸಾಧಿಸುತ್ತಿದೆ. ವಿದೇಶಗಳಿಗೆ ಆಹಾರ ಧಾನ್ಯ, ತರಕಾರಿ, ಹಣ್ಣುಗಳನ್ನು ರಫ್ತು ಮಾಡುವ ದೇಶ ನಮ್ಮದಾಗಿದೆ. ಪ್ರತಿ ಜಿಲ್ಲೆಗಳಲ್ಲಿ ಗೋದಾಮು, ಶೀತಲೀಕರಣ ಘಟಕ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಕೃಷಿ ಕ್ಷೇತ್ರದ ಮೂಲಸೌಕರ್ಯಕ್ಕೆ ₹1 ಲಕ್ಷ ಕೋಟಿ ಮೀಸಲಿಡಲಾಗಿದೆ ಎಂದು ತಿಳಿಸಿದರು.