<p><strong>ಬೇಲೂರು(ಹಾಸನ):</strong> ಕೇಂದ್ರದ ಬಿಜೆಪಿ ಸರ್ಕಾರ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ಎಲ್ಲ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ಸ್ವಾವಲಂಬಿ ದೇಶ, ಆತ್ಮನಿರ್ಭರ ದೇಶ ನಿರ್ಮಾಣ ಮಾಡುವ ಸಂಕಲ್ಪವನ್ನು ನರೇಂದ್ರ ಮೋದಿ ಸರ್ಕಾರ ಮಾಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.</p>.<p>ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಕೋವಿಡ್- 19 ಸಂದರ್ಭದಲ್ಲಿ ಜಗತ್ತು ತತ್ತರಿಸಿದ ಸಂದರ್ಭದಲ್ಲಿ ದೇಶದಲ್ಲಿಯೇ ಲಸಿಕೆ ತಯಾರಿಸುವ ಮೂಲಕ ದೇಶದ ಜನರನ್ನು ರಕ್ಷಣೆ ಮಾಡುವ ಕೆಲಸವನ್ನು ನರೇಂದ್ರ ಮೋದಿ ಸರ್ಕಾರ ಮಾಡಿದೆ. ನಾವು ಇಲ್ಲಿ ಬದುಕಿ ಕುಳಿತಿದ್ದರೆ, ಅದು ನಮ್ಮ ದೇಶದಲ್ಲಿ ಉಚಿತ ಲಸಿಕೆ ಕಾರಣದಿಂದ ಎಂದರು.</p>.<p>ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ, ಈ ಭಾಗಕ್ಕೆ ಹೇಳಿಕೊಳ್ಳುವಂತಹ ಯೋಜನೆ ರೂಪಿಸಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ, ಈ ಭಾಗದ ರೈತರ ಜಮೀನಿಗೆ ಯಗಚಿ ಜಲಾಶಯದ ನೀರು ಒದಗಿಸಿದ್ದಾರೆ. ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಹೇಳಿದರು.</p>.<p>ಆಹಾರ, ಔಷಧಿ, ಕೌಶಲಗಳಲ್ಲಿ ದೇಶ ಸ್ವಾವಲಂಬನೆ ಸಾಧಿಸುತ್ತಿದೆ. ವಿದೇಶಗಳಿಗೆ ಆಹಾರ ಧಾನ್ಯ, ತರಕಾರಿ, ಹಣ್ಣುಗಳನ್ನು ರಫ್ತು ಮಾಡುವ ದೇಶ ನಮ್ಮದಾಗಿದೆ. ಪ್ರತಿ ಜಿಲ್ಲೆಗಳಲ್ಲಿ ಗೋದಾಮು, ಶೀತಲೀಕರಣ ಘಟಕ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಕೃಷಿ ಕ್ಷೇತ್ರದ ಮೂಲಸೌಕರ್ಯಕ್ಕೆ ₹1 ಲಕ್ಷ ಕೋಟಿ ಮೀಸಲಿಡಲಾಗಿದೆ ಎಂದು ತಿಳಿಸಿದರು.</p>.<p>ರೈತರ ಪರವಾಗಿ ನಿಂತಿರುವ ಬಿಜೆಪಿ ಸರ್ಕಾರಕ್ಕೆ ಜನರು ಬೆಂಬಲ ನೀಡಬೇಕು. ಯುಪಿಎ ಸರ್ಕಾರ, ನರೇಂದ್ರ ಮೋದಿ ನೇತೃತ್ವದ ಸರ್ಕಾರಗಳನ್ನು ತುಲನೆ ಮಾಡಿ ಮತ ಚಲಾಯಿಸಬೇಕು ಎಂದರು.</p>.<p><u><strong>ಜಾತಿ ರಾಜಕಾರಣ:</strong></u><br />ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಜಾತಿ ಆಧಾರಿತ ರಾಜಕಾರಣ ಮಾಡುತ್ತಿದೆ. ಸಿದ್ದರಾಮಯ್ಯ ಅವರು ಶಾದಿ ಭಾಗ್ಯದ ಮೂಲಕ ಒಂದು ವರ್ಗವನ್ನು ಒಲೈಕೆ ಮಾಡಿದ್ದಾರೆ.</p>.<p>ಆದರೆ, ಬಿಜೆಪಿ ಸರ್ಕಾರ ಎಲ್ಲರಿಗೂ ಸರ್ಕಾರದ ಸೌಕರ್ಯಗಳನ್ನು ಒದಗಿಸುವ ಕೆಲಸ ಮಾಡುತ್ತಿದೆ. ಇದು ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಇರುವ ವ್ಯತ್ಯಾಸ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು(ಹಾಸನ):</strong> ಕೇಂದ್ರದ ಬಿಜೆಪಿ ಸರ್ಕಾರ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ಎಲ್ಲ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ಸ್ವಾವಲಂಬಿ ದೇಶ, ಆತ್ಮನಿರ್ಭರ ದೇಶ ನಿರ್ಮಾಣ ಮಾಡುವ ಸಂಕಲ್ಪವನ್ನು ನರೇಂದ್ರ ಮೋದಿ ಸರ್ಕಾರ ಮಾಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.</p>.<p>ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಕೋವಿಡ್- 19 ಸಂದರ್ಭದಲ್ಲಿ ಜಗತ್ತು ತತ್ತರಿಸಿದ ಸಂದರ್ಭದಲ್ಲಿ ದೇಶದಲ್ಲಿಯೇ ಲಸಿಕೆ ತಯಾರಿಸುವ ಮೂಲಕ ದೇಶದ ಜನರನ್ನು ರಕ್ಷಣೆ ಮಾಡುವ ಕೆಲಸವನ್ನು ನರೇಂದ್ರ ಮೋದಿ ಸರ್ಕಾರ ಮಾಡಿದೆ. ನಾವು ಇಲ್ಲಿ ಬದುಕಿ ಕುಳಿತಿದ್ದರೆ, ಅದು ನಮ್ಮ ದೇಶದಲ್ಲಿ ಉಚಿತ ಲಸಿಕೆ ಕಾರಣದಿಂದ ಎಂದರು.</p>.<p>ಯುಪಿಎ ಸರ್ಕಾರ ಅಧಿಕಾರದಲ್ಲಿ ಇದ್ದಾಗ, ಈ ಭಾಗಕ್ಕೆ ಹೇಳಿಕೊಳ್ಳುವಂತಹ ಯೋಜನೆ ರೂಪಿಸಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ, ಈ ಭಾಗದ ರೈತರ ಜಮೀನಿಗೆ ಯಗಚಿ ಜಲಾಶಯದ ನೀರು ಒದಗಿಸಿದ್ದಾರೆ. ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಹೇಳಿದರು.</p>.<p>ಆಹಾರ, ಔಷಧಿ, ಕೌಶಲಗಳಲ್ಲಿ ದೇಶ ಸ್ವಾವಲಂಬನೆ ಸಾಧಿಸುತ್ತಿದೆ. ವಿದೇಶಗಳಿಗೆ ಆಹಾರ ಧಾನ್ಯ, ತರಕಾರಿ, ಹಣ್ಣುಗಳನ್ನು ರಫ್ತು ಮಾಡುವ ದೇಶ ನಮ್ಮದಾಗಿದೆ. ಪ್ರತಿ ಜಿಲ್ಲೆಗಳಲ್ಲಿ ಗೋದಾಮು, ಶೀತಲೀಕರಣ ಘಟಕ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಕೃಷಿ ಕ್ಷೇತ್ರದ ಮೂಲಸೌಕರ್ಯಕ್ಕೆ ₹1 ಲಕ್ಷ ಕೋಟಿ ಮೀಸಲಿಡಲಾಗಿದೆ ಎಂದು ತಿಳಿಸಿದರು.</p>.<p>ರೈತರ ಪರವಾಗಿ ನಿಂತಿರುವ ಬಿಜೆಪಿ ಸರ್ಕಾರಕ್ಕೆ ಜನರು ಬೆಂಬಲ ನೀಡಬೇಕು. ಯುಪಿಎ ಸರ್ಕಾರ, ನರೇಂದ್ರ ಮೋದಿ ನೇತೃತ್ವದ ಸರ್ಕಾರಗಳನ್ನು ತುಲನೆ ಮಾಡಿ ಮತ ಚಲಾಯಿಸಬೇಕು ಎಂದರು.</p>.<p><u><strong>ಜಾತಿ ರಾಜಕಾರಣ:</strong></u><br />ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಜಾತಿ ಆಧಾರಿತ ರಾಜಕಾರಣ ಮಾಡುತ್ತಿದೆ. ಸಿದ್ದರಾಮಯ್ಯ ಅವರು ಶಾದಿ ಭಾಗ್ಯದ ಮೂಲಕ ಒಂದು ವರ್ಗವನ್ನು ಒಲೈಕೆ ಮಾಡಿದ್ದಾರೆ.</p>.<p>ಆದರೆ, ಬಿಜೆಪಿ ಸರ್ಕಾರ ಎಲ್ಲರಿಗೂ ಸರ್ಕಾರದ ಸೌಕರ್ಯಗಳನ್ನು ಒದಗಿಸುವ ಕೆಲಸ ಮಾಡುತ್ತಿದೆ. ಇದು ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಇರುವ ವ್ಯತ್ಯಾಸ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>