ಓದಿ...ನಾವು ರಾಜ ಮನೆತನದವರಲ್ಲ,ಬಡ ರೈತನ ಮಕ್ಕಳು:ಎಚ್.ಡಿ. ಕುಮಾರಸ್ವಾಮಿ
ರಾಜ್ಯದಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು ಜೆಡಿಎಸ್ ಜೊತೆಗಿದ್ದಾರೆ. ಭಗವಂತನ, ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದರು.
ದೇವೇಗೌಡರು ಕೃಷ್ಣಾ ಮೇಲ್ದಂಡೆ ಯೋಜನೆಗೆ ನನ್ನ ಪ್ರಧಾನಿ ಹುದ್ದೆ ಹೋದರೂ ಚಿಂತೆ ಇಲ್ಲ ಎಂದು ಹೇಳಿದ್ದರು ಎಂದು ಸ್ಮರಿಸಿದರು.
ಸ್ವರೂಪ್ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಪ್ರಕಾಶ್ ಅವರ ಜೊತೆ ಕೆಲಸ ಮಾಡಿದ್ದೇನೆ. ಇವತ್ತು ಸ್ವರೂಪ್ ರೀತಿಯಲ್ಲಿ ಮತ್ತೊಬ್ಬ ಪ್ರಕಾಶ್ ನಮ್ಮ ಜೊತೆಗಿದ್ದಾರೆ. ಅದಕ್ಕೆ ನಾನು, ಕುಮಾರಸ್ವಾಮಿ, ರೇವಣ್ಣ ಜೊತೆಗೂಡಿ, ಪಕ್ಷದ ಅಧ್ಯಕ್ಷನಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದರು.
ಹಾಸನ, ಮಂಡ್ಯ, ಕೋಲಾರ ಜಿಲ್ಲೆಗಳು ಕಾಂಗ್ರೆಸ್ ಮುಕ್ತವಾಗಿವೆ. ಮುಸ್ಲಿಂ ಸಮಾಜವೇ ದೇವೇಗೌಡರ ಮಗ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಲಿದ್ದಾರೆ. ಮೋದಿ, ಸೋನಿಯಾ ಗಾಂಧಿ ಬಗ್ಗೆ ನಮಗೆ ಚಿಂತೆ ಇಲ್ಲ. ರಾಜ್ಯದ ಜನರ ಬಗ್ಗೆ ಮಾತ್ರ ನಮಗೆ ಚಿಂತೆ ಇದೆ. ನಿಮ್ಮ ಆಶೀರ್ವಾದ ನಮ್ಮ ಜೊತೆಗಿದ್ದರೆ, 25 ವರ್ಷ ಜೆಡಿಎಸ್ ಸರ್ಕಾರ ಅಧಿಕಾರದಲ್ಲಿ ಇರಲಿದೆ ಎಂದು ಹೇಳಿದರು.
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸ್ವರೂಪ್ ಗೆ ಅಧಿಕಾರ ಇಲ್ಲದೇ ಇಷ್ಟೊಂದು ಜನ ಬೆಂಬಲವಿದೆ. ನಿಮ್ಮ ಪರವಾಗಿ ನಾವು ಏನು ಮಾಡಬೇಕೋ ಮಾಡುತ್ತೇವೆ.ಕುಮಾರಸ್ವಾಮಿ ಸರ್ಕಾರದ ಹಗರಣಗಳನ್ನು ತೆಗೆಯಲಿದ್ದಾರೆ. ಜೆಡಿಎಸ್ ಗೆಲುವಿಗೆ ಎಲ್ಲರೂ ಸಂಕಲ್ಪ ಮಾಡಿ ಎಂದರು.