ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ. ಈ ಸರ್ಕಾರ ಯಾವಾಗ ಹೋಗುತ್ತೋ ಗೊತ್ತಿಲ್ಲ. ಪ್ರಭಾವಿ ಸಚಿವರೊಬ್ಬರು ತಮ್ಮ ಮೇಲಿರುವ ಅಕ್ರಮಗಳಿಂದ ಪಾರಾಗಲು ಹರಸಾಹಸ ಮಾಡುತ್ತಿದ್ದಾರೆ. ಕೇಂದ್ರ ಬಿಜೆಪಿ ನಾಯಕರ ಕೈ,ಕಾಲು ಕಟ್ಟುತ್ತಿದ್ದಾರೆ. 50–60 ಶಾಸಕರನ್ನು ಕರೆದುಕೊಂಡು ಬೇಲಿ ಹಾರಲು ತಯಾರಿ ನಡೆಸುತ್ತಿದ್ದಾರೆ ಎಂದು ಯಾರೋ ಮೊನ್ನೆ ನನಗೆ ಮಾಹಿತಿ ನೀಡಿದರು’ ಎಂದರು.