<p><strong>ಹೆತ್ತೂರು (ಹಾಸನ):</strong> ಹೋಬಳಿ ವ್ಯಾಪ್ತಿಯ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ರಾಜ್ಯ ಹೆದ್ದಾರಿ -85ರಲ್ಲಿ ಬಿಸಿಲೆ ಘಾಟ್ನ ಅಡ್ಡಹೊಳೆ ಸಮೀಪ ಭೂಕುಸಿತ ಸಂಭವಿಸಿದೆ.</p>.<p>ಭಾರೀ ಪ್ರಮಾಣದ ಮಣ್ಣು, ಕಲ್ಲುಗಳು 7 ಗಂಟೆ ವೇಳೆಗೆ ರಸ್ತೆಗೆ ಬಿದ್ದಿದ್ದು, ಸಂಚಾರ ಸ್ಥಗಿತಗೊಂಡಿತ್ತು. ಬಿಸಿಲೆ –ಕುಕ್ಕೆ ಸುಬ್ರಹ್ಮಣ್ಯ ಮಾರ್ಗದಲ್ಲಿ 2 ಗಂಟೆ ಕಾಲ ಸಂಚಾರ ಸ್ಥಗಿತವಾಗಿತ್ತು. </p>.<p>ಲೋಕೋಪಯೋಗಿ, ಅರಣ್ಯ ಇಲಾಖೆ ಸಿಬ್ಬಂದಿಯು ಸ್ಥಳೀಯರ ಸಹಾಯದಿಂದ ತುರ್ತು ಕಾರ್ಯಾಚರಣೆ ನಡೆಸಿ, ಮಣ್ಣು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p><strong>ಕೊಡಗು– ಮಳೆ ಬಿರುಸು<br>ಮಡಿಕೇರಿ:</strong> ಕೊಡಗು ಜಿಲ್ಲಾ ಕೇಂದ್ರ, ನಾಪೋಕ್ಲು, ಸಂಪಾಜೆ, ಶಾಂತಳ್ಳಿ ಸೇರಿದಂತೆ ಘಟ್ಟ ಪ್ರದೇಶಗಳಲ್ಲಿ ಬುಧವಾರ ಬಿರುಸಿನ ಮಳೆಯಾಗಿದೆ.</p>.<p>ಸಂಪಾಜೆಯಲ್ಲಿ 8.5 ಸೆಂ.ಮೀ, ಭಾಗಮಂಡಲ 5.8, ಶಾಂತಳ್ಳಿ 4.7, ಮಡಿಕೇರಿ 3.7, ಸೋಮವಾರಪೇಟೆಯಲ್ಲಿ 3.5 ಸೆಂ.ಮೀನಷ್ಟು ಮಳೆಯಾಗಿದೆ.</p>.<p><strong>ಮುಳ್ಳಯ್ಯನಗಿರಿ: ‘ಸದ್ಯ ಪ್ರವಾಸ ಬೇಡ’ </strong></p><p><strong>ಚಿಕ್ಕಮಗಳೂರು ವರದಿ:</strong> ಮುಳ್ಳಯ್ಯನಗಿರಿ ಮತ್ತು ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ತೆರಳುವ ರಸ್ತೆಯಲ್ಲಿ ವಿವಿಧೆಡೆ ಮಣ್ಣು ಕುಸಿದಿದ್ದು, ಸೆ.14ರವರೆಗೆ ಪ್ರವಾಸಿಗರು ಭೇಟಿ ನೀಡದಂತೆ ಜಿಲ್ಲಾಡಳಿತ ಸಲಹೆ ನೀಡಿದೆ.</p>.<p>‘ವಾಹನಗಳ ಸಂಖ್ಯೆ ಹೆಚ್ಚಾದರೆ ಮತ್ತಷ್ಟು ಭೂಕುಸಿತದ ಸಾಧ್ಯತೆ ಇದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಹೋಂಸ್ಟೆ, ರೆಸಾರ್ಟ್ಗಳಲ್ಲಿ ಕೊಠಡಿ ಕಾಯ್ದಿರಿಸಿರುವ ಪ್ರವಾಸಿಗರಿಗೆ, ಸ್ಥಳೀಯರಿಗೆ ವಿನಾಯಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆತ್ತೂರು (ಹಾಸನ):</strong> ಹೋಬಳಿ ವ್ಯಾಪ್ತಿಯ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ರಾಜ್ಯ ಹೆದ್ದಾರಿ -85ರಲ್ಲಿ ಬಿಸಿಲೆ ಘಾಟ್ನ ಅಡ್ಡಹೊಳೆ ಸಮೀಪ ಭೂಕುಸಿತ ಸಂಭವಿಸಿದೆ.</p>.<p>ಭಾರೀ ಪ್ರಮಾಣದ ಮಣ್ಣು, ಕಲ್ಲುಗಳು 7 ಗಂಟೆ ವೇಳೆಗೆ ರಸ್ತೆಗೆ ಬಿದ್ದಿದ್ದು, ಸಂಚಾರ ಸ್ಥಗಿತಗೊಂಡಿತ್ತು. ಬಿಸಿಲೆ –ಕುಕ್ಕೆ ಸುಬ್ರಹ್ಮಣ್ಯ ಮಾರ್ಗದಲ್ಲಿ 2 ಗಂಟೆ ಕಾಲ ಸಂಚಾರ ಸ್ಥಗಿತವಾಗಿತ್ತು. </p>.<p>ಲೋಕೋಪಯೋಗಿ, ಅರಣ್ಯ ಇಲಾಖೆ ಸಿಬ್ಬಂದಿಯು ಸ್ಥಳೀಯರ ಸಹಾಯದಿಂದ ತುರ್ತು ಕಾರ್ಯಾಚರಣೆ ನಡೆಸಿ, ಮಣ್ಣು ತೆರವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟರು.</p>.<p><strong>ಕೊಡಗು– ಮಳೆ ಬಿರುಸು<br>ಮಡಿಕೇರಿ:</strong> ಕೊಡಗು ಜಿಲ್ಲಾ ಕೇಂದ್ರ, ನಾಪೋಕ್ಲು, ಸಂಪಾಜೆ, ಶಾಂತಳ್ಳಿ ಸೇರಿದಂತೆ ಘಟ್ಟ ಪ್ರದೇಶಗಳಲ್ಲಿ ಬುಧವಾರ ಬಿರುಸಿನ ಮಳೆಯಾಗಿದೆ.</p>.<p>ಸಂಪಾಜೆಯಲ್ಲಿ 8.5 ಸೆಂ.ಮೀ, ಭಾಗಮಂಡಲ 5.8, ಶಾಂತಳ್ಳಿ 4.7, ಮಡಿಕೇರಿ 3.7, ಸೋಮವಾರಪೇಟೆಯಲ್ಲಿ 3.5 ಸೆಂ.ಮೀನಷ್ಟು ಮಳೆಯಾಗಿದೆ.</p>.<p><strong>ಮುಳ್ಳಯ್ಯನಗಿರಿ: ‘ಸದ್ಯ ಪ್ರವಾಸ ಬೇಡ’ </strong></p><p><strong>ಚಿಕ್ಕಮಗಳೂರು ವರದಿ:</strong> ಮುಳ್ಳಯ್ಯನಗಿರಿ ಮತ್ತು ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ತೆರಳುವ ರಸ್ತೆಯಲ್ಲಿ ವಿವಿಧೆಡೆ ಮಣ್ಣು ಕುಸಿದಿದ್ದು, ಸೆ.14ರವರೆಗೆ ಪ್ರವಾಸಿಗರು ಭೇಟಿ ನೀಡದಂತೆ ಜಿಲ್ಲಾಡಳಿತ ಸಲಹೆ ನೀಡಿದೆ.</p>.<p>‘ವಾಹನಗಳ ಸಂಖ್ಯೆ ಹೆಚ್ಚಾದರೆ ಮತ್ತಷ್ಟು ಭೂಕುಸಿತದ ಸಾಧ್ಯತೆ ಇದೆ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಹೋಂಸ್ಟೆ, ರೆಸಾರ್ಟ್ಗಳಲ್ಲಿ ಕೊಠಡಿ ಕಾಯ್ದಿರಿಸಿರುವ ಪ್ರವಾಸಿಗರಿಗೆ, ಸ್ಥಳೀಯರಿಗೆ ವಿನಾಯಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>