ಜೀತ ಪದ್ಧತಿ ಒಳಗಾದವರಿಗೆ ಪುನರ್ವಸತಿ ಕಲ್ಪಿಸಬೇಕು. ಮಾನವ ಕಳ್ಳಸಾಗಾಣಿಕೆಯೂ ಜೀತ ಪದ್ಧತಿಯೊಳಗೆ ಸೇರಿದ್ದು, ಅದನ್ನು ತಪ್ಪಿಸುವುದು ಸರ್ಕಾರ ಹಾಗೂ ಸಾರ್ವಜನಿಕರ ಕರ್ತವ್ಯ. ಜೀತ ಪದ್ಧತಿಯ ವಿಧಗಳನ್ನು ಗುರುತಿಸುವಿಕೆ, ಪುನರ್ವಸತಿ ಕಲ್ಪಿಸುವುದರ ಕುರಿತು ಮಾಹಿತಿ ತಿಳಿದು ಗ್ರಾಮೀಣ ಮಟ್ಟದಿಂದ ಕಾರ್ಯಗತಗೊಳಿಸುವುದು ಅವಶ್ಯಕ ಎಂದು ಅಭಿಪ್ರಾಯಪಟ್ಟರು.
ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಮಾತನಾಡಿ, ಜೀತ ಪದ್ಧತಿ ಮುಕ್ತ ರಾಜ್ಯಕ್ಕಾಗಿ ಎಲ್ಲರೂ ಶ್ರಮಿಸಬೇಕು. ಪುನರ್ವಸತಿ ಕಲ್ಪಿಸುವಾಗ ಸರಿಯಾಗಿ ಸವಲತ್ತು ತಲುಪಿಸಬೇಕು. ಅದಕ್ಕಾಗಿ ಮಾಹಿತಿ ತಿಳಿದುಕೊಂಡು ಕೆಳ ಹಂತದಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.