ಪಕ್ಷದ ನೋಂದಣಿ ಪ್ರಕಿಯೆ ಅಂತಿಮ ಹಂತದಲ್ಲಿದೆ. ರಾಜ್ಯವ್ಯಾಪಿ ಪಕ್ಷ ಸಂಘಟಿಸುವ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ. ಹಲವು ಜಿಲ್ಲೆಗಳಲ್ಲಿ ಸಮಿತಿ ಹಾಗೂ ಘಟಕಗಳನ್ನು ರಚಿಸಲಾಗಿದೆ. ರಾಜ್ಯದಲ್ಲಿ ಹಾಸನ, ಮಂಡ್ಯ, ಮಂಗಳೂರು, ತುಮಕೂರು, ದಕ್ಷಿಣ ಕನ್ನಡ ಹಾಗೂ ಬೆಳಗಾವಿ ಸೇರಿದಂತೆ ಒಟ್ಟು 12 ಕ್ಷೇತ್ರಗಳಲ್ಲಿ ಪಕ್ಷದ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ನಂತರದ ದಿನಗಳಲ್ಲಿ ವಿಧಾನಸಭಾ ಚುನಾವಣೆ, ನಗರಸಭೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತಿಸಲಾಗಿದೆ. ಅಲ್ಲದೇ, ಕುಂದಗೋಳ ಹಾಗೂ ಚಿಂಚೋಳಿ ಕ್ಷೇತ್ರದ ಉಪ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಸ್ಪರ್ಧಿಸುವರು ಎಂದು ನುಡಿದರು.