<p><strong>ಹೊಳೆನರಸೀಪುರ:</strong> ರಾಜ್ಯ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಂಡಿರುವ ಶಿಕ್ಷಕರಿಗೆ ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸುವಂತೆ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಲಿಂಗ ನೇತೃತ್ವದಲ್ಲಿ ಶುಕ್ರವಾರ ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಈ ವೇಳೆ ಮಾತನಾಡಿದ ಮಹಾಲಿಂಗ, ಹಲವಾರು ವರ್ಷಗಳಿಂದ ಶಿಕ್ಷಕರು ಸರ್ಕಾರದ ಹಲವಾರು ಗಣತಿಗಳಲ್ಲಿ ಭಾಗವಹಿಸಿ ಉತ್ತಮ ಫಲಿತಾಂಶ ತರುವಲ್ಲಿ ಕೈಜೋಡಿಸಿದ್ದೇವೆ. ಈ ಬಾರಿಯೂ ರಾಜ್ಯ ಸರ್ಕಾರ ಸಮೀಕ್ಷೆಗೆ ನಮಗೆ ಹೊಣೆಗಾರಿಕೆ ನೀಡಿದೆ ಎಂದರು.</p>.<p>ಈ ಹಿಂದೆ ಸಮೀಕ್ಷೆಗಳನ್ನು ಬರವಣಿಗೆಯಲ್ಲಿ ಸಿದ್ದಪಡಿಸಿ ಕೊಡಲಾಗುತ್ತಿತ್ತು. ಆದರೆ ಈ ಬಾರಿ ಗಣತಿಗಾರರಿಗೆ ನೂತನ ತಂತ್ರಜ್ಞಾನವನ್ನು ಅಳವಡಿಸಿ, ಕಾಗದ ರಹಿತ ಸಮೀಕ್ಷೆ ನಡೆಸಲು ಸೂಚಿಸಿದ್ದು, ಹೊಸದಾಗಿ ಆ್ಯಪ್ ನೀಡಿದೆ. ಅದರಲ್ಲಿ ಸಮೀಕ್ಷೆ ಎಲ್ಲ ಅಂಶಗಳನ್ನು ದಾಖಲಿಸುವ ಅವಕಾಶ ಕಲ್ಪಿಸಿದೆ. ಆದರೆ ಆ್ಯಪ್ನಲ್ಲಿ ಮಾಹಿತಿ ದಾಖಲಿಸಲು ಹಲವಾರು ಸಮಸ್ಯೆಗಳು ಎದುರಾಗುತ್ತಿವೆ ಎಂದು ತಿಳಿಸಿದರು.</p>.<p>ಸಮೀಕ್ಷೆಯಲ್ಲಿ ತೊಡಗಿರುವ ಶಿಕ್ಷಕರಿಗೆ ಯುಎಚ್ಐಡಿ, ಮನೆಗಳ ಜಿಪಿಎಸ್ ಲೋಕೇಶನ್ ಹುಡುಕುವ ವಿಧಾನ, ವಿದ್ಯುತ್ತ ಆರ್ಆರ್ ನಂಬರ್ಗಳನ್ನು ಪರಿಷ್ಕರಿಸಿ, ಮನೆ ಪಟ್ಟಿ, ದೂರವಾಣಿ ಸಂಖ್ಯೆ, ಕುಟುಂಬದ ಯಜಮಾನರ ಹೆಸರು ಕೊಡುವುದರಿಂದ ಗಣತಿ ಸುಸೂತ್ರವಾಗಿ ನಡೆಸಲು ಸಹಕಾರಿ ಆಗಲಿದೆ ಎಂದರು.</p>.<p>ಸಮೀಕ್ಷೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಅದರ್ಶ ಶಾಲೆಯ ಶಿಕ್ಷಕರನ್ನು ಕೈಬಿಟ್ಟಿದ್ದು, ಅವರನ್ನೂ ನೇಮಕ ಮಾಡಿದಲ್ಲಿ ಒತ್ತಡ ಕಡಿಮೆ ಆಗುವ ಸಾಧ್ಯತೆ ಇದೆ. ಅವರನ್ನೂ ಸಮೀಕ್ಷೆಗೆ ನೇಮಕ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಸಮೀಕ್ಷೆ ವೇಳೆ ಒಟಿಪಿ ಬರಬೇಕು. ಆದರೆ ಅದು ಬರುವುದೇ ಇಲ್ಲ. ತುಂಬ ಸಮಸ್ಯೆ ಎದುರಿಸುವಂತಾಗಿದೆ. ಜಿಪಿಎಸ್ ಲೊಕೇಶನ್ ಮೂಲಕ ಜಾತಿ ಗಣತಿ ಕಷ್ಟ ಸಾಧ್ಯ ಎಂದು ತಿಳಿಸಿದರು.</p>.<p>ಅನಾರೋಗ್ಯಪೀಡಿತ ಶಿಕ್ಷಕರನ್ನು ಹಾಗೂ 55 ವರ್ಷ ಮೇಲಿನ ಶಿಕ್ಷಕರನ್ನು ಗಣತಿ ಕಾರ್ಯದಿಂದ ಕೈಬಿಡಬೇಕು. ಗಣತಿ ಕಾರ್ಯದಲ್ಲಿ ಒಬ್ಬ ಸಮೀಕ್ಷೆದಾರರಿಗೆ ಗರಿಷ್ಠ 75 ಕುಟುಂಬಗಳನ್ನು ದಾಖಲಿಸಬೇಕೆಂಬ ನೀತಿ ಆಳವಡಿಸಬೇಕು ಎಂದು ಮನವಿ ಮಾಡಿದರು.</p>.<p>ಮನವಿ ಆಲಿಸಿದ ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಮಾತನಾಡಿ, ನಿಮ್ಮ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿ ಮೂಲಕ ಸರ್ಕಾರದ ಗಮನಕ್ಕೆ ತರಲಾಗುವುದು. ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಸಭೆ ಕರೆದಿದ್ದು, ಅಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ:</strong> ರಾಜ್ಯ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಂಡಿರುವ ಶಿಕ್ಷಕರಿಗೆ ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸುವಂತೆ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಲಿಂಗ ನೇತೃತ್ವದಲ್ಲಿ ಶುಕ್ರವಾರ ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಈ ವೇಳೆ ಮಾತನಾಡಿದ ಮಹಾಲಿಂಗ, ಹಲವಾರು ವರ್ಷಗಳಿಂದ ಶಿಕ್ಷಕರು ಸರ್ಕಾರದ ಹಲವಾರು ಗಣತಿಗಳಲ್ಲಿ ಭಾಗವಹಿಸಿ ಉತ್ತಮ ಫಲಿತಾಂಶ ತರುವಲ್ಲಿ ಕೈಜೋಡಿಸಿದ್ದೇವೆ. ಈ ಬಾರಿಯೂ ರಾಜ್ಯ ಸರ್ಕಾರ ಸಮೀಕ್ಷೆಗೆ ನಮಗೆ ಹೊಣೆಗಾರಿಕೆ ನೀಡಿದೆ ಎಂದರು.</p>.<p>ಈ ಹಿಂದೆ ಸಮೀಕ್ಷೆಗಳನ್ನು ಬರವಣಿಗೆಯಲ್ಲಿ ಸಿದ್ದಪಡಿಸಿ ಕೊಡಲಾಗುತ್ತಿತ್ತು. ಆದರೆ ಈ ಬಾರಿ ಗಣತಿಗಾರರಿಗೆ ನೂತನ ತಂತ್ರಜ್ಞಾನವನ್ನು ಅಳವಡಿಸಿ, ಕಾಗದ ರಹಿತ ಸಮೀಕ್ಷೆ ನಡೆಸಲು ಸೂಚಿಸಿದ್ದು, ಹೊಸದಾಗಿ ಆ್ಯಪ್ ನೀಡಿದೆ. ಅದರಲ್ಲಿ ಸಮೀಕ್ಷೆ ಎಲ್ಲ ಅಂಶಗಳನ್ನು ದಾಖಲಿಸುವ ಅವಕಾಶ ಕಲ್ಪಿಸಿದೆ. ಆದರೆ ಆ್ಯಪ್ನಲ್ಲಿ ಮಾಹಿತಿ ದಾಖಲಿಸಲು ಹಲವಾರು ಸಮಸ್ಯೆಗಳು ಎದುರಾಗುತ್ತಿವೆ ಎಂದು ತಿಳಿಸಿದರು.</p>.<p>ಸಮೀಕ್ಷೆಯಲ್ಲಿ ತೊಡಗಿರುವ ಶಿಕ್ಷಕರಿಗೆ ಯುಎಚ್ಐಡಿ, ಮನೆಗಳ ಜಿಪಿಎಸ್ ಲೋಕೇಶನ್ ಹುಡುಕುವ ವಿಧಾನ, ವಿದ್ಯುತ್ತ ಆರ್ಆರ್ ನಂಬರ್ಗಳನ್ನು ಪರಿಷ್ಕರಿಸಿ, ಮನೆ ಪಟ್ಟಿ, ದೂರವಾಣಿ ಸಂಖ್ಯೆ, ಕುಟುಂಬದ ಯಜಮಾನರ ಹೆಸರು ಕೊಡುವುದರಿಂದ ಗಣತಿ ಸುಸೂತ್ರವಾಗಿ ನಡೆಸಲು ಸಹಕಾರಿ ಆಗಲಿದೆ ಎಂದರು.</p>.<p>ಸಮೀಕ್ಷೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಅದರ್ಶ ಶಾಲೆಯ ಶಿಕ್ಷಕರನ್ನು ಕೈಬಿಟ್ಟಿದ್ದು, ಅವರನ್ನೂ ನೇಮಕ ಮಾಡಿದಲ್ಲಿ ಒತ್ತಡ ಕಡಿಮೆ ಆಗುವ ಸಾಧ್ಯತೆ ಇದೆ. ಅವರನ್ನೂ ಸಮೀಕ್ಷೆಗೆ ನೇಮಕ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಸಮೀಕ್ಷೆ ವೇಳೆ ಒಟಿಪಿ ಬರಬೇಕು. ಆದರೆ ಅದು ಬರುವುದೇ ಇಲ್ಲ. ತುಂಬ ಸಮಸ್ಯೆ ಎದುರಿಸುವಂತಾಗಿದೆ. ಜಿಪಿಎಸ್ ಲೊಕೇಶನ್ ಮೂಲಕ ಜಾತಿ ಗಣತಿ ಕಷ್ಟ ಸಾಧ್ಯ ಎಂದು ತಿಳಿಸಿದರು.</p>.<p>ಅನಾರೋಗ್ಯಪೀಡಿತ ಶಿಕ್ಷಕರನ್ನು ಹಾಗೂ 55 ವರ್ಷ ಮೇಲಿನ ಶಿಕ್ಷಕರನ್ನು ಗಣತಿ ಕಾರ್ಯದಿಂದ ಕೈಬಿಡಬೇಕು. ಗಣತಿ ಕಾರ್ಯದಲ್ಲಿ ಒಬ್ಬ ಸಮೀಕ್ಷೆದಾರರಿಗೆ ಗರಿಷ್ಠ 75 ಕುಟುಂಬಗಳನ್ನು ದಾಖಲಿಸಬೇಕೆಂಬ ನೀತಿ ಆಳವಡಿಸಬೇಕು ಎಂದು ಮನವಿ ಮಾಡಿದರು.</p>.<p>ಮನವಿ ಆಲಿಸಿದ ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಮಾತನಾಡಿ, ನಿಮ್ಮ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿ ಮೂಲಕ ಸರ್ಕಾರದ ಗಮನಕ್ಕೆ ತರಲಾಗುವುದು. ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಸಭೆ ಕರೆದಿದ್ದು, ಅಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>