‘ಜಿಲ್ಲಾ ಸಮ್ಮೇಳನಕ್ಕೆ ₹5 ಲಕ್ಷ, ₹1 ಲಕ್ಷ ವಾರ್ಷಿಕ ವೆಚ್ಚ, ತಾಲ್ಲೂಕು ಸಮ್ಮೇಳನಕ್ಕೆ ₹ 1 ಲಕ್ಷ, ವಾರ್ಷಿಕ
ವೆಚ್ಚ ₹25 ಸಾವಿರ ಅನುದಾನ ಬರುತ್ತದೆ. ಆದರೆ ಮಂಜೇಗೌಡ ಬೆಂಬಲಿತ ಅಭ್ಯರ್ಥಿ ಜಿಲ್ಲಾ ಸಮ್ಮೇಳನಕ್ಕೆ
₹4.30 ಲಕ್ಷ, ತಾಲ್ಲೂಕು ಸಮ್ಮೇಳನಕ್ಕೆ ₹60 ಸಾವಿರ ಬರುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಅವರಿಗೆ
ಪರಿಷತ್ ಬೈಲಾ ಗೊತ್ತಿಲ್ಲ’ ಎಂದು ತಿಳಿಸಿದರು.
‘ಸಾಹಿತ್ಯ ಸಮ್ಮೇಳನಗಳಿಗೆ ಯಾರಿಂದಲೂ ಹಣ ಸಂಗ್ರಹ ಮಾಡಿಲ್ಲ ಎಂದು ಸುಳ್ಳು ಹೇಳುತ್ತಾರೆ. ಪರಿಷತ್ ಭವನದ ಎದುರಿನ ವಾಣಿಜ್ಯ ಮಳಿಗೆಗಳನ್ನು ಯಾವ ಮಾನದಂಡದ ಮೇಲೆ ಬಾಡಿಗೆ ನೀಡಲಾಗಿದೆ ಎಂಬುದನ್ನು ತಿಳಿಸಬೇಕು. ಅನಿಲ್ ಕುಮಾರ್ ನಗರಸಭೆ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ₹ 10 ಲಕ್ಷ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಮತ್ತು ವಿದ್ಯಾರ್ಥಿಗಳಿಗೆ ಸ್ಟ್ಯಾಂಪ್ ಅನ್ನು ₹ 10ಕ್ಕೆ ಮಾರಾಟ ಮಾಡಿ ಹಣ ಸಂಗ್ರಹ ಮಾಡಲಾಗಿದೆ. ಸಾರ್ವಜನಿಕರಿಂದ, ಅಧಿಕಾರಿಗಳಿಂದ ಪಡೆದಿರುವ ಹಣದ ಬಗ್ಗೆ ಮಾಹಿತಿ ನೀಡಲು ಏಕೆ ಹಿಂಜರಿಯುತ್ತಿದ್ದಾರೆ’ ಎಂದು ಪ್ರಶ್ನಿಸಿದರು.